ಇದು ಅಪರೂಪದ ಪ್ರೇಮಕಥೆ: ಮಾಜಿ ಪತ್ನಿಯನ್ನೇ ಮರು ಮದುವೆಯಾದ ವ್ಯಕ್ತಿ

ಉತ್ತರ ಪ್ರದೇಶ: ಯಾವುದೋ ಕ್ಷುಲ್ಲಕ ಕಾರಣದಿಂದಾಗಿ ದುಡುಕಿ ವಿಚ್ಛೇದನ ಪಡೆದುಕೊಂಡಿದ್ದ ಜೋಡಿಯೊಂದು ಐದು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಮರು ಮದುವೆಯಾಗುವ ಮೂಲಕ ಸುದ್ದಿಯಲ್ಲಿದ್ದಾರೆ. ಈ ಅಪರೂಪದ ಪ್ರೇಮಕಥೆಯನ್ನು ಕಂಡ ಹಲವರು ನಿಜವಾದ ಪ್ರೀತಿಗೆ ಎಂದಿಗೂ ಸಾವಿಲ್ಲ ಎಂದು ಹೇಳಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​​ನಲ್ಲಿ ನಡೆದಿದ್ದು, ಇಲ್ಲಿನ ವಿನಯ್ ಜೈಸ್ವಾಲ್ ಎಂಬವರು ತಮ್ಮ ಮಾಜಿ ಪತ್ನಿ ಪೂಜಾ ಚೌದರಿಯವರನ್ನು ವಿಚ್ಛೇದನ ಪಡೆದ ಐದು ವರ್ಷಗಳ ಬಳಿಕ ಮತ್ತೊಮ್ಮೆ ಮರು ಮದುವೆಯಾಗಿದ್ದಾರೆ. 2012 ನೇ ಇಸವಿಯಲ್ಲಿ ಇವರಿಬ್ಬರಿಗೂ ಮದುವೆಯಾಗಿತ್ತು. ಆದರೆ ಇವರಿಬ್ಬರ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಹಾಗೂ ಕೆಲವೊಂದು ಮನಸ್ತಾಪಗಳ ಕಾರಣದಿಂದಾಗಿ 2018 ರಲ್ಲಿ ಇಬ್ಬರೂ ವಿಚ್ಛೇದನವನ್ನು ಪಡೆದುಕೊಂಡು ತಮ್ಮ ಪತಿ ಪತ್ನಿ ಸಂಬಂಧಕ್ಕೆ ಎಳ್ಳುನೀರು ಬಿಡುತ್ತಾರೆ. ಆದರೆ ಇದೀಗ ಐದು ವರ್ಷಗಳ ಬಳಿಕ ಡಿವೋರ್ಸ್ ಪಡೆದುಕೊಂಡಿದ್ದ ಈ ಜೋಡಿ, ಮತ್ತೊಮ್ಮೆ ಒಂದಾಗಿದ್ದಾರೆ. ಈ ಅಪರೂಪದ ಪ್ರೇಮಕತೆಯನ್ನು ಸ್ವತಃ ವಿನಯ್ ಜೈಸ್ವಾಲ್ ಅವರು ತಮ್ಮ ಪೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದೇ ವರ್ಷ 2023 ರಲ್ಲಿ ವಿನಯ್ ಅವರಿಗೆ ಹೃದಯಾಘಾತವಾಗಿತ್ತು, ಅಲ್ಲದೆ ಈ ಕಾರಣದಿಂದ ಅವರು ಓಪನ್ ಸರ್ಜರಿಗೂ ಕೂಡಾ ಒಳಗಾಗಿದ್ದರು. ಈ ವಿಷಯ ತಿಳಿದ ತಕ್ಷಣ ಮಾಜಿ ಪತ್ನಿ ಪೂಜಾ ತಮ್ಮ ಕೋಪತಾಪವನ್ನೆಲ್ಲಾ ಬದಿಗಿಟ್ಟು ಓಡೋಡಿ ಬಂದು ವಿನಯ್ ಅವರ ಕಷ್ಟಕಾಲದಲ್ಲಿ ಜೊತೆಯಾಗಿ ನಿಲ್ಲುತ್ತಾರೆ. ನಮ್ಮಿಬ್ಬರ ನಡುವಿನ ಮನಸ್ತಾಪದ ಗೋಡೆ ಮಂಜಿನಂತೆ ಕರಗಿ ಹೋಗಲು ಹೃದಯಾಘಾತ ಕೂಡಾ ಒಂದು ಮುಖ್ಯ ಕಾರಣ, ಈಗ ನಮ್ಮಿಬ್ಬರ ನಡುವೆ ಇದ್ದ ಮನಸ್ತಾಪಗಳೆಲ್ಲಾ ದೂರವಾಗಿ ಮನಸ್ಪೂರ್ವಕವಾಗಿ ಮರು ಮದುವೆಯಾಗಿದ್ದೇವೆ ಎಂದು ವಿನಯ್ ಬರೆದುಕೊಂಡಿದ್ದಾರೆ.

Umesha HS

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

44 seconds ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

27 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

45 mins ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

1 hour ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago