ಬರೇಲಿ: ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಕೋತಿ ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಕುರಿತು ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.
ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ಪತ್ನಿ ಮತ್ತು ನಾಲ್ಕು ತಿಂಗಳ ಮಗುವಿನೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದವು. ದಂಪತಿಗಳು ಮಂಗಗಳನ್ನು ಓಡಿಸಲು ಪ್ರಯತ್ನಿಸಿದರು.
ಆದರೆ ಕೋತಿಗಳ ಹಿಂಡು ನಿರ್ದೇಶ್ ಅವರನ್ನು ಸುತ್ತುವರಿಯಿತು. ಕೂಡಲೇ ಅವರು ಮೆಟ್ಟಿಲುಗಳ ಕಡೆಗೆ ಓಡಲು ಪ್ರಯತ್ನಿಸಿದಾಗ, ಮಗು ಅವನ ಕೈಯಿಂದ ಕೆಳಗೆ ಬಿದ್ದಿತು. ಕೋತಿಯೊಂದು ಬಂದು ನವಜಾತ ಶಿಶುವನ್ನು ಹಿಡಿದು ಛಾವಣಿಯಿಂದ ಎಸೆದಿದೆ. ನೆಲಕ್ಕೆ ಬಿದ್ದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…