News Karnataka Kannada
Friday, May 03 2024
ಉತ್ತರ ಪ್ರದೇಶ

ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷರಿಗೆ ಬಾಂಬ್ ಬೆದರಿಕೆ ಕರೆ

ಉತ್ತರಪ್ರದೇಶದ ಫತೇಪುರ್‌ನಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ.
Photo Credit : News Kannada

ಲಕ್ನೋ: ಉತ್ತರಪ್ರದೇಶದ ಫತೇಪುರ್‌ನಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷರಿಗೆ ಬಾಂಬ್ ಬೆದರಿಕೆಯೊಂದು ಬಂದಿದೆ.

ಮಥುರಾದ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷ ಶಕುಂಭರಿ ಪೀಠಾಧೀಶ್ವರದ ಅಶುತೋಷ್ ಪಾಂಡೆ ಅವರಿಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ.

ಶಕುಂಭರಿ ಪೀಠಾಧೀಶ್ವರದ ಅಶುತೋಷ್ ಪಾಂಡೆ ಅವರು ಮಥುರಾದ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನ ಅಧ್ಯಕ್ಷರಾಗಿದ್ದಾರೆ. ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಶ್ರೀ ಕೃಷ್ಣ ಜನ್ಮಭೂಮಿ ವರ್ಸಸ್ ಶಾಹಿ ಮಸೀದಿ ಈದ್ಗಾದಲ್ಲಿ ಸಲ್ಲಿಸಲಾದ ಮೊಕದ್ದಮೆಗೆ ಪ್ರಮುಖ ಕಕ್ಷಿದಾರರಾಗಿದ್ದಾರೆ.

ಶುಕ್ರವಾರ ಪ್ರಕರಣದ ವಿಚಾರಣೆಗಾಗಿ ಅವರು ಹೈಕೋರ್ಟ್‌ಗೆ ತೆರಳಿದ್ದರು. ಅಲ್ಲಿಂದ ಸಂಜೆ ಮಥುರಾಗೆ ಹೋಗುತ್ತಿದ್ದಾಗ 8 ಗಂಟೆ ಸುಮಾರಿಗೆ ಅವರ ಮೊಬೈಲ್‌ಗೆ ವಾಟ್ಸಾಪ್ ಕರೆ ಮಾಡಿದ ವ್ಯಕ್ತಿ ತನ್ನನ್ನು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಎಂದು ಬಣ್ಣಿಸಿಕೊಂಡಿದ್ದಾನೆ.

ಅನಾಮಧೇಯ ನಂಬರಿನಿಂದ ಕರೆ ಬಂದಿದ್ದು ಸ್ವೀಕರಿಸಿದಾಗ, ಪ್ರಕರಣ ಹಿಂಪಡೆಯದಿದ್ದರೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಜೊತೆಗೆ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾನೆ.

ಈ ಸಂಬಂಧ ಅಶುತೋಷ್‌ ಅವರು ಸದರ್ ಕೊತ್ವಾಲಿಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಎಸ್‌ಐ ಸಂತೋಷ್‌ಕುಮಾರ್‌ ತಿಳಿಸಿದ್ದಾರೆ. ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದ ನಂತರ ನಂಬರ್ ಎಲ್ಲಿಗೆ ಸೇರಿದೆ ಎಂಬುದು ಸ್ಪಷ್ಟವಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು