ಉತ್ತರ ಪ್ರದೇಶ: ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನೀಡಲಿಲ್ಲ ಎಂದು ಯುವಕನೊಬ್ಬ ತನ್ನ ಸಹೋದರಿಯ ಶವವನ್ನು ಮೋಟಾರ್ಸೈಕಲ್ನಲ್ಲಿ ಸಾಗಿಸಿದ ಘಟನೆ ಬುಧವಾರ ಬೆಳಿಗ್ಗೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಅಂಜಲಿ (20) ಎಂದು ಗುರುತಿಸಲಾಗಿದ್ದು, ನವೀನ್ ಬಸ್ತಿ ಪಶ್ಚಿಮ ನಿವಾಸಿ ಪ್ರಬಲ್ ಪ್ರತಾಪ್ ಸಿಂಗ್ ಅವರ ಪುತ್ರಿ. ನೀರು ಕಾಯಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಒಡೆದು ವಿದ್ಯುದಾಘಾತಕ್ಕೆ ಒಳಗಾಗಿದ್ದಳು. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮೃತ ಅಂಜಲಿಯ ಮೃತದೇಹವನ್ನು ಸಾಗಿಲಿಸಲು ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನೀಡಲಿಲ್ಲ. ಹೀಗಾಗಿ ಅಂಜಲಿಯ ಸಹೋದರ ಆಕೆಯ ಮೃತದೇಹವನ್ನು ತನ್ನ ಮೋಟಾರ್ಸೈಕಲ್ನಲ್ಲಿ ಸಾಗಿಸಿದ ಹೃದಯ ವಿದ್ರಾಹವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.