ಅಯೋಧ್ಯೆ: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ದೇವೇಗೌಡ್ರ ಕಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಹೀಗಾಗಿ ಇವರು ಕಾರ್ಯಕ್ರಮಕ್ಕೆ ಒಂದು ದಿನದ ಮುನ್ನವೇ ಹೋಗಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇಷ್ಟೇ ಅಲ್ಲ ದೇವೇಗೌಡ್ರ ಕುಟುಂಬ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಫೋಟೋ ತೆಗೆಸಿಕೊಂಡಿದೆ.