ಧಾರವಾಡ: ಅಯೋಧ್ಯೆಯಲ್ಲಿ ರಾಮಲಲ್ಲಾನನ್ನು ನೋಡಲು ಅದೆಷ್ಟೋ ದೇಶ ವಿದೇಶಗಳಲ್ಲಿ ಜನ ಕಾಯುತ್ತಿದ್ದಾರೆ. 22ರಂದು ಉದ್ಘಾಟನೆ ಹಾಗೂ ನಂತರದಲ್ಲಿ ಸಾರ್ವಜನಿಕರಿಗೆ ಶ್ರೀರಾಮನ ದರ್ಶನಕ್ಕೂ ಅವಕಾಶಕಲ್ಪಿಸಿರುವ ಹಿನ್ನೆಲೆ ಧಾರವಾಡದಿಂದ ನಾಲ್ವರು ಯುವಕರು ತಮ್ಮ ಎರಡು ಬೈಕ್ಗಳ ಮೂಲಕ ಶ್ರೀರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾರೆ.
ಧಾರವಾಡದ ದರ್ಶನ ಪವಾರ್, ದರ್ಶನ್ ಭಾವೆ, ಬಾಲರಾಜ ದೊಡಮನಿ ಹಾಗೂ ಲಕ್ಷ್ಮಣ ಹಂಚಿನಮನಿ ಎಂಬುವರು ಶ್ರೀರಾಮನನನ್ನು ನೋಡಲು ತಮ್ಮ ಪ್ರಯಾಣವನ್ನು ಶುರು ಮಾಡಿದ್ದಾರೆ.
ಸುಮಾರು 1800 ಕಿ.ಮೀ. ದೂರವಿರುವ ಅಯೋಧ್ಯೆಗೆ ಜೈ ಶ್ರೀರಾಮ ಎಂದು ಘೋಷಣೆ ಕೂಗುವ ಮೂಲಕ ರಾಯಲ್ಸ್ ಎನ್ಫೀಲ್ಡ್ ಹಾಗೂ ಬೆನಾಲಿ ಎಂಬ ಬೈಕ್ ಗಳಲ್ಲಿ ಹೊರಟಿರುವ ಯುವಕರು ಜ. 21ರಂದು ತಲುಪುವ ಯೋಜನೆ ಹೊಂದಿದ್ದಾರೆ.
ಈ ಪ್ರವಾಸಕ್ಕೆ ಸುಮಾರು 2 ಲಕ್ಷ ವೆಚ್ಚ ಬರಲಿದೆ, ದೇವರ ದರ್ಶನದ ಎದುರು ಹಣ ದೊಡ್ಡದಲ್ಲ ಅನ್ನೋ ಸವಾರರು, ಇದೊಂದು ಸದಾವಕಾಶ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನಗರದ ಅನೇಕ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಬೆಳಗಾವಿ ಮೂಲಕ ಬೈಕ್ ಮೇಲೆ ಅಯೋಧ್ಯಾ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.