News Karnataka Kannada
Thursday, May 02 2024
ಉತ್ತರ ಪ್ರದೇಶ

ಧಾರವಾಡದಿಂದ ಅಯೋಧ್ಯೆಗೆ ಬೈಕ್‌ನಲ್ಲಿ ಹೊರಟ ಯುವಕರು

ಅಯೋಧ್ಯೆಯಲ್ಲಿ  ರಾಮಲಲ್ಲಾನನ್ನು ನೋಡಲು ಅದೆಷ್ಟೋ ದೇಶ ವಿದೇಶಗಳಲ್ಲಿ ಜನ ಕಾಯುತ್ತಿದ್ದಾರೆ.  22ರಂದು ಉದ್ಘಾಟನೆ ಹಾಗೂ ನಂತರದಲ್ಲಿ ಸಾರ್ವಜನಿಕರಿಗೆ ಶ್ರೀರಾಮನ ದರ್ಶನಕ್ಕೂ ಅವಕಾಶಕಲ್ಪಿಸಿರುವ ಹಿನ್ನೆಲೆ ಧಾರವಾಡದಿಂದ ನಾಲ್ವರು ಯುವಕರು ತಮ್ಮ ಎರಡು ಬೈಕ್‌ಗಳ ಮೂಲಕ ಶ್ರೀರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾರೆ.
Photo Credit : News Kannada

ಧಾರವಾಡ: ಅಯೋಧ್ಯೆಯಲ್ಲಿ  ರಾಮಲಲ್ಲಾನನ್ನು ನೋಡಲು ಅದೆಷ್ಟೋ ದೇಶ ವಿದೇಶಗಳಲ್ಲಿ ಜನ ಕಾಯುತ್ತಿದ್ದಾರೆ.  22ರಂದು ಉದ್ಘಾಟನೆ ಹಾಗೂ ನಂತರದಲ್ಲಿ ಸಾರ್ವಜನಿಕರಿಗೆ ಶ್ರೀರಾಮನ ದರ್ಶನಕ್ಕೂ ಅವಕಾಶಕಲ್ಪಿಸಿರುವ ಹಿನ್ನೆಲೆ ಧಾರವಾಡದಿಂದ ನಾಲ್ವರು ಯುವಕರು ತಮ್ಮ ಎರಡು ಬೈಕ್‌ಗಳ ಮೂಲಕ ಶ್ರೀರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾರೆ.

ಧಾರವಾಡದ ದರ್ಶನ ಪವಾರ್, ದರ್ಶನ್ ಭಾವೆ, ಬಾಲರಾಜ ದೊಡಮನಿ ಹಾಗೂ ಲಕ್ಷ್ಮಣ ಹಂಚಿನಮನಿ ಎಂಬುವರು ಶ್ರೀರಾಮನನನ್ನು ನೋಡಲು ತಮ್ಮ ಪ್ರಯಾಣವನ್ನು ಶುರು ಮಾಡಿದ್ದಾರೆ.

ಸುಮಾರು 1800 ಕಿ.ಮೀ. ದೂರವಿರುವ ಅಯೋಧ್ಯೆಗೆ ಜೈ ಶ್ರೀರಾಮ ಎಂದು ಘೋಷಣೆ ಕೂಗುವ ಮೂಲಕ ರಾಯಲ್ಸ್ ಎನ್​ಫೀಲ್ಡ್ ಹಾಗೂ ಬೆನಾಲಿ ಎಂಬ ಬೈಕ್‌ ಗಳಲ್ಲಿ ಹೊರಟಿರುವ ಯುವಕರು ಜ. 21ರಂದು ತಲುಪುವ ಯೋಜನೆ ಹೊಂದಿದ್ದಾರೆ.

ಈ ಪ್ರವಾಸಕ್ಕೆ ಸುಮಾರು 2 ಲಕ್ಷ ವೆಚ್ಚ ಬರಲಿದೆ, ದೇವರ ದರ್ಶನದ ಎದುರು ಹಣ ದೊಡ್ಡದಲ್ಲ ಅನ್ನೋ ಸವಾರರು, ಇದೊಂದು ಸದಾವಕಾಶ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನಗರದ ಅನೇಕ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಬೆಳಗಾವಿ ಮೂಲಕ ಬೈಕ್ ಮೇಲೆ ಅಯೋಧ್ಯಾ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು