ಇಟಾವಾ: ಇಟಾವಾ ಬಳಿಯ ಲಕ್ನೋ-ಆಗ್ರಾ ಎಕ್ಸ್ ಪ್ರೆಸ್ ವೇಯಲ್ಲಿ ಕಂಟೈನರ್ ಮತ್ತು ಡಬಲ್ ಡೆಕ್ಕರ್ ಬಸ್ ನಡುವೆ ಭಾನುವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 42 ಮಂದಿ ಗಾಯಗೊಂಡಿದ್ದಾರೆ.
ಎಲ್ಲಾ ಗಾಯಾಳುಗಳನ್ನು ಸೈಫಾಯಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ಗಾಯಾಳುಗಳಿಗೆ ಸೂಕ್ತ ನೆರವು ಮತ್ತು ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವರದಿಗಳ ಪ್ರಕಾರ,ಬಸ್ ಗೋರಖ್ಪುರದಿಂದ ಅಜ್ಮೀರ್ ಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ 60 ಪ್ರಯಾಣಿಕರಿದ್ದರು.
ಮೃತರನ್ನು ಶ್ರೇಯಾ (7), ಹಮೀದ್ ಅಲಿ (35), ಸುಮೇರ್ ಸಿಂಗ್ ಗುಜ್ಜರ್ (52) ಮತ್ತು ಸೋನು ಚತುರ್ವೇದಿ (32) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.