ಆಯೋಧ್ಯೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ವಂಚಕರು ಹಲವು ಭಕ್ತರಿಂದ ದೇಣಿಗೆ ಸಂಗ್ರಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.
ಶ್ರೀರಾಮ ಪ್ರಾಣ ಪ್ರತಿಷ್ಠಾ ಸೇವಾ ಸಮಿತಿ, ರಾಮ ಮಂದಿರ ನಿರ್ಮಾಣ ಸಮಿತಿ, ರಾಮ ಮಂದಿರ ಜನ್ಮಭೂಮಿ ಸಮಿತಿ ಸೇರಿದಂತೆ ಹಲವು ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ರಿಸಿಪ್ಟ್ ಪ್ರಿಂಟ್ ಮಾಡಿಸಿ ಜನರಿಂದ ಲಕ್ಷ ಲಕ್ಷ ರೂಪಾಯಿ ವಂಚಿಸುವ ಕಾರ್ಯ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಖುದ್ದು ವಿಶ್ವ ಹಿಂದೂ ಪರಿಷತ್ ಹೇಳಿದೆ.
ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ದೇಣಿಗೆ ಸಂಗ್ರಹಿಸಿ ಆಗಿದೆ. ಇದೀಗ ಅಧಿಕೃತ ಯಾವುದೇ ಸಮಿತಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಯಾರೂ ಮೋಸ ಹೋಗಬಾರದು ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ.