News Karnataka Kannada
Monday, April 29 2024
ಉತ್ತರ ಪ್ರದೇಶ

ರಾಮಮಂದಿರ ಹೆಸರಿನಲ್ಲಿ ರಿಸಿಪ್ಟ್ ಪ್ರಿಂಟ್‌ ಮಾಡಿಸಿ ಹಣ ಸಂಗ್ರಹಿಸುತ್ತಿರುವ ವಂಚಕರು

ಅಯೋಧ್ಯೆಯಲ್ಲಿ  ರಾಮಲಲ್ಲಾನನ್ನು ನೋಡಲು ಅದೆಷ್ಟೋ ದೇಶ ವಿದೇಶಗಳಲ್ಲಿ ಜನ ಕಾಯುತ್ತಿದ್ದಾರೆ.  22ರಂದು ಉದ್ಘಾಟನೆ ಹಾಗೂ ನಂತರದಲ್ಲಿ ಸಾರ್ವಜನಿಕರಿಗೆ ಶ್ರೀರಾಮನ ದರ್ಶನಕ್ಕೂ ಅವಕಾಶಕಲ್ಪಿಸಿರುವ ಹಿನ್ನೆಲೆ ಧಾರವಾಡದಿಂದ ನಾಲ್ವರು ಯುವಕರು ತಮ್ಮ ಎರಡು ಬೈಕ್‌ಗಳ ಮೂಲಕ ಶ್ರೀರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾರೆ.
Photo Credit : News Kannada

ಆಯೋಧ್ಯೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ವಂಚಕರು ಹಲವು ಭಕ್ತರಿಂದ ದೇಣಿಗೆ ಸಂಗ್ರಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.

ಶ್ರೀರಾಮ ಪ್ರಾಣ ಪ್ರತಿಷ್ಠಾ ಸೇವಾ ಸಮಿತಿ, ರಾಮ ಮಂದಿರ ನಿರ್ಮಾಣ ಸಮಿತಿ, ರಾಮ ಮಂದಿರ ಜನ್ಮಭೂಮಿ ಸಮಿತಿ ಸೇರಿದಂತೆ ಹಲವು ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ರಿಸಿಪ್ಟ್ ಪ್ರಿಂಟ್ ಮಾಡಿಸಿ ಜನರಿಂದ ಲಕ್ಷ ಲಕ್ಷ ರೂಪಾಯಿ ವಂಚಿಸುವ ಕಾರ್ಯ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಖುದ್ದು ವಿಶ್ವ ಹಿಂದೂ ಪರಿಷತ್ ಹೇಳಿದೆ.

ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ದೇಣಿಗೆ ಸಂಗ್ರಹಿಸಿ ಆಗಿದೆ. ಇದೀಗ ಅಧಿಕೃತ ಯಾವುದೇ ಸಮಿತಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಯಾರೂ ಮೋಸ ಹೋಗಬಾರದು ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು