ಉತ್ತರ ಪ್ರದೇಶ: ಶಾಲೆಗೆ ಪದೇ ಪದೇ ರಜೆ ಹಾಕ್ತೀಯಾ ಎಂದು ತಾಯಿ ಬೈದಿದ್ದಕ್ಕೆ 13 ವರ್ಷದ ಬಾಲಕಿ ಚಲಿಸುತ್ತಿದ್ದ ರೈಲಿನ ಎದುರು ಹಾರಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
13 ವರ್ಷದ ಖುಷಿ ಶರ್ಮಾಗೆ ಬುಧವಾರ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಅದಕ್ಕೆ ತಾಯಿ ಮಗಳು ಶಾಲೆಗೆ ಹೋಗುವಂತೆ ಒತ್ತಾಯಿಸಿ ಕಾಪಳಕ್ಕೆ ಬಾರಿಸಿದ್ದಾರೆ. ಖುಷಿ ಶಾಲೆಗೆ ಹೋಗುವ ಬದಲು ಅಲ್ವಾರ್-ಮಥುರಾ ರೈಲ್ವೇ ಹಳಿ ಬಳಿ ಹೋಗಿ ರೈಲಿನ ಮುಂದೆ ಜಿಗಿದಿದ್ದಾಳೆ. ಘಟನೆಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.