ಗೋರಖ್ಪುರ: ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಬಲೂನುಗಳಲ್ಲಿ ಅನಿಲ ತುಂಬಿಸಲು ಬಳಸಲಾಗುತ್ತಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಚೌರಿ ಚೌರಾ ಪೊಲೀಸ್ ವೃತ್ತದ ವ್ಯಾಪ್ತಿಯ ಫುತಹ್ವಾ ಇನಾರ್ ಚೌರಾಹಾದಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡವರಲ್ಲಿ ಒಬ್ಬರು ಒಂದು ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ.
ವರದಿಗಳ ಪ್ರಕಾರ, 35 ವರ್ಷದ ಶ್ರೀಕಿಶನ್ ಗುಪ್ತಾ ತನ್ನ ಸೈಕಲ್ ನಲ್ಲಿ ಅನಿಲ ತುಂಬಿದ ಬಲೂನ್ ಗಳನ್ನು ಮಾರಾಟ ಮಾಡುತ್ತಿದ್ದನು. ಅವನು ಬಲೂನ್ ಗಳನ್ನು ತುಂಬುತ್ತಿದ್ದಾಗ, ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿತು ಮತ್ತು ಅವನು ಸ್ಥಳದಲ್ಲೇ ಸಾವನ್ನಪ್ಪಿದನು.
ಸೈಕಲ್ ಬಳಿ ನಿಂತಿದ್ದ 25 ವರ್ಷದ ದಿಲೀಪ್ ಶರ್ಮಾ ಎಂಬಾತ ತನ್ನ ಒಂದು ಕಣ್ಣಿನಲ್ಲಿ ದೃಷ್ಟಿ ಕಳೆದುಕೊಂಡಿದ್ದಾನೆ. ಈ ದುರ್ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾನೆ.
ಸಿಲಿಂಡರ್ ಅನ್ನು ಹೀಲಿಯಂ ಬದಲಿಗೆ ಅಗ್ಗದ ಅಸಿಟಲೀನ್ ಅನಿಲದಿಂದ ತುಂಬಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಚೌರಿಚೌರಾ ಪೊಲೀಸ್ ಇನ್ಸ್ಪೆಕ್ಟರ್ ಜಯಂತ್ ಕುಮಾರ್ ಸಿಂಗ್ ಅವರು ತನಿಖೆ ನಡೆಯುತ್ತಿದೆ ಮತ್ತು ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಶೀಘ್ರದಲ್ಲೇ ತಿಳಿಯಲಾಗುವುದು ಎಂದು ಹೇಳಿದರು.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.