News Karnataka Kannada
Monday, April 29 2024
ಉತ್ತರ ಪ್ರದೇಶ

ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಸಾರ್ವಜನಿಕಗೊಳಿಸಲಾಗುವುದು: ನ್ಯಾಯಾಲಯ

ಅಯೋಧ್ಯೆ ವಿವಾದಗಳೆಲ್ಲಾ ಮುಗಿದು ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದೀಗ ಎಲ್ಲರ ಚಿತ್ತ ಕಾಶಿ ಹಾಗೂ ಮಥುರಾದತ್ತ ನೆಟ್ಟಿದೆ.
Photo Credit : News Kannada

ವಾರಣಾಸಿ: ಅಯೋಧ್ಯೆ ವಿವಾದಗಳೆಲ್ಲಾ ಮುಗಿದು ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದೀಗ ಎಲ್ಲರ ಚಿತ್ತ ಕಾಶಿ ಹಾಗೂ ಮಥುರಾದತ್ತ ನೆಟ್ಟಿದೆ.

ಕಾಶಿ ವಿಶ್ವನಾಥ ಮಂದಿರದ ಆವರಣದಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ನಡೆದಿರು ಪುರಾತತ್ವ ಇಲಾಖೆಯ ಸಮೀಕ್ಷಾ ವರದಿಯನ್ನು ಸಾರ್ವಜನಿಕಗೊಳಿಸಬೇಕೇ? ಅಥವಾ ಗೌಪ್ಯವಾಗಿಡಬೇಕೆ ಅನ್ನೋ ಚರ್ಚೆಗೆ ವಾರಣಾಸಿ ಜಿಲ್ಲಾ ಕೋರ್ಟ್ ಉತ್ತರ ನೀಡಿದೆ.

ಗ್ಯಾನವಾಪಿ ಮಸೀದಿ ಕುರಿತು ಪುರಾತತ್ವ ಇಲಾಖೆ ನೀಡಿದ ವರದಿ ಆಧರಿಸಿ ಕೋರ್ಟ್ ತೀರ್ಪು ನೀಡಲಿದೆ. ಆದೇಶದ ಬಳಿಕ ಪುರಾತತ್ವ ಇಲಾಖೆಯ ವರದಿಯನ್ನು ಎರಡೂ ಕಕ್ಷಿದಾರರಿಗೆ ನೀಡಲು ವಾರಣಾಸಿ ಕೋರ್ಟ್ ಅನುಮತಿ ನೀಡಿದೆ.

ಹಿಂದೂ ಪರ ವಕೀಲ ವಿಷ್ಣುಶಂಕರ್ ಜೈನ್ ತಮ್ಮ ವಾದ ಮಂಡಿಸಿದ್ದಾರೆ. ಪುರಾತತ್ವ ಇಲಾಖೆ ಸಾರ್ವಜನಿಕಗೊಳಿಸಬೇಕು ಅನ್ನೋದು ಹಿಂದೂಗಳ ವಾದವಾಗಿತ್ತು. ಮುಸ್ಲಿಂ ವರ ವಾದವನ್ನೂ ಕೇಳಿಸಿಕೊಂಡ ನ್ಯಾಯಾಲಯ, ಪುರಾತತ್ವ ಇಲಾಖೆ ವರದಿ ಬಹಿರಂಗ ಪಡಿಸಲು ಅನುಮತಿ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು