ವಾರಣಾಸಿ: ಅಯೋಧ್ಯೆ ವಿವಾದಗಳೆಲ್ಲಾ ಮುಗಿದು ರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಇದೀಗ ಎಲ್ಲರ ಚಿತ್ತ ಕಾಶಿ ಹಾಗೂ ಮಥುರಾದತ್ತ ನೆಟ್ಟಿದೆ.
ಕಾಶಿ ವಿಶ್ವನಾಥ ಮಂದಿರದ ಆವರಣದಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ನಡೆದಿರು ಪುರಾತತ್ವ ಇಲಾಖೆಯ ಸಮೀಕ್ಷಾ ವರದಿಯನ್ನು ಸಾರ್ವಜನಿಕಗೊಳಿಸಬೇಕೇ? ಅಥವಾ ಗೌಪ್ಯವಾಗಿಡಬೇಕೆ ಅನ್ನೋ ಚರ್ಚೆಗೆ ವಾರಣಾಸಿ ಜಿಲ್ಲಾ ಕೋರ್ಟ್ ಉತ್ತರ ನೀಡಿದೆ.
ಗ್ಯಾನವಾಪಿ ಮಸೀದಿ ಕುರಿತು ಪುರಾತತ್ವ ಇಲಾಖೆ ನೀಡಿದ ವರದಿ ಆಧರಿಸಿ ಕೋರ್ಟ್ ತೀರ್ಪು ನೀಡಲಿದೆ. ಆದೇಶದ ಬಳಿಕ ಪುರಾತತ್ವ ಇಲಾಖೆಯ ವರದಿಯನ್ನು ಎರಡೂ ಕಕ್ಷಿದಾರರಿಗೆ ನೀಡಲು ವಾರಣಾಸಿ ಕೋರ್ಟ್ ಅನುಮತಿ ನೀಡಿದೆ.
ಹಿಂದೂ ಪರ ವಕೀಲ ವಿಷ್ಣುಶಂಕರ್ ಜೈನ್ ತಮ್ಮ ವಾದ ಮಂಡಿಸಿದ್ದಾರೆ. ಪುರಾತತ್ವ ಇಲಾಖೆ ಸಾರ್ವಜನಿಕಗೊಳಿಸಬೇಕು ಅನ್ನೋದು ಹಿಂದೂಗಳ ವಾದವಾಗಿತ್ತು. ಮುಸ್ಲಿಂ ವರ ವಾದವನ್ನೂ ಕೇಳಿಸಿಕೊಂಡ ನ್ಯಾಯಾಲಯ, ಪುರಾತತ್ವ ಇಲಾಖೆ ವರದಿ ಬಹಿರಂಗ ಪಡಿಸಲು ಅನುಮತಿ ಇದೆ.