News Karnataka Kannada
Thursday, May 02 2024
ಉತ್ತರ ಪ್ರದೇಶ

ಗದ್ದೆಗೆ ಹೋಗಿ ಗೋಧಿ ಬೆಳೆ ಕಟಾವು ಮಾಡಿದ ನಟಿ ಹೇಮಾ ಮಾಲಿನಿ

ಮಥುರಾ ಲೋಕಸಭಾ ಸಂಸದೆ ಹಾಗೂ ನಟಿ ಹೇಮಾ ಮಾಲಿನಿ ಅವರು ಚುನಾವಣಾ ಪ್ರಚಾರದ ವೇಳೆ ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಕೈಯಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡುತ್ತಿದ್ದ ದೃಶ್ಯ ಕಂಡು ಬಂತು.
Photo Credit : NewsKarnataka

ಮಥುರಾ: ಮಥುರಾ ಲೋಕಸಭಾ ಸಂಸದೆ ಹಾಗೂ ನಟಿ ಹೇಮಾ ಮಾಲಿನಿ ಅವರು ಚುನಾವಣಾ ಪ್ರಚಾರದ ವೇಳೆ ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಕೈಯಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡುತ್ತಿದ್ದ ದೃಶ್ಯ ಕಂಡು ಬಂತು.

ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಬೆಳೆ ಕಟಾವು ಮಾಡುತ್ತಿರುವ ಚಿತ್ರ ಹಾಗೂ ಅಲ್ಲಿ ರೈತ ಮಹಿಳೆಯರೊಂದಿಗೆ ತೆಗೆದ ಫೋಟೊಗಳನ್ನು ಹಂಚಿಕೊಂಡಿರುವ ಹೇಮಾ ಮಾಲಿನಿ ಅವರು, ನಾನು ಕಳೆದ ಹತ್ತು ವರ್ಷಗಳಿಂದ ಈ ಗ್ರಾಮಕ್ಕೆ ಬರುತ್ತಿದ್ದೇನೆ, ರೈತರೊಂದಿಗೆ ಮಾತನಾಡಲು ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದಲ್ಲಿ ಅವರು ಕಾಂಜೀವರಂ ಸೀರೆಯನ್ನು ಧರಿಸಿ ಮಧ್ಯಾಹ್ನದ ಸಮಯದಲ್ಲಿ ರೈತರೊಂದಿಗೆ ಬೆಳೆ ಕಟಾವು ಮಾಡುತ್ತಿರುವುದನ್ನು ಕಾಣಬಹುದು.

ಹೇಮಾ ಮಾಲಿನಿ ಸತತ ಎರಡು ಬಾರಿ ಈ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಈ ಬಾರಿಯೂ ಬಿಜೆಪಿ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದೆ .

ಇದಕ್ಕೂ ಮುನ್ನ 2019ರ ಲೋಕಸಭೆ ಚುನಾವಣೆಯಲ್ಲಿ ಹೇಮಾ ಮಾಲಿನಿ ಇದೇ ರೀತಿ ರೈತರೊಂದಿಗೆ ಕಾಣಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು