ಉತ್ತರ ಪ್ರದೇಶ: 95 ಮಕ್ಕಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡಿದೆ. ಈ ಮಕ್ಕಳನ್ನು ಬಿಹಾರದಿಂದ ಉತ್ತರ ಪ್ರದೇಶದ ಕಡೆಗೆ ಕರೆದೊಯ್ಯಲಾಗುತ್ತಿತ್ತು ಬಳಿಕ ತಿಳಿದು ಬಂದಿದೆ.
ಅಯೋಧ್ಯೆ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸರ್ವೇಶ್ ಅವಸ್ತಿ ಈ ಬಗ್ಗೆ ಮಾತನಾಡಿದ್ದು, ಶುಕ್ರವಾರ ಬೆಳಗ್ಗೆ ಈ ವಿಚಾರ ತಿಳಿದುಬಂದಿದೆ. ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚತುರ್ವೇದಿ ಅವರಿಗೆ ಈ ವಿಷಯ ಕುರಿತಾಗಿ ಮಾಹಿತಿ ಬಂದಿದೆ. ಮಾಹಿತಿ ಬಂದಂತೆ ಸಿಡಬ್ಲ್ಯೂಸಿ ಸದಸ್ಯರು ಮಕ್ಕಳನ್ನು ರಕ್ಷಿಸಿದ್ದಾರೆ.
ಉತ್ತರ ಪ್ರದೇಶದ ಬಾಲ ಆಯೋಗ 95 ಮಕ್ಕಳನ್ನು ರಕ್ಷಣೆ ಮಾಡುವ ಮೂಲಕ ಅವರ ಜೀವ ಉಳಿಸಿದ್ದಾರೆ. ಸದ್ಯ ಈ ಪ್ರಕರಣ ಕುರಿತಾಗಿ ತನಿಖೆ ನಡೆಯುತ್ತಿದೆ.