News Karnataka Kannada
Sunday, May 12 2024
ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ರಿಲಯನ್ಸ್‌ ಸೇರಿದಂತೆ ಉದ್ಯಮ ಸಮೂಹಗಳಿಂದ ಸಹಸ್ರಾರು ಕೋಟಿ ರೂ. ಹೂಡಿಕೆ

In Uttar Pradesh, thousands of crores of rupees have been siphoned off from industry conglomerates, including Reliance. Investment
Photo Credit : IANS

ಲಕ್ನೋ: ರಿಲಯನ್ಸ್, ಬಿರ್ಲಾ ಮತ್ತು ಟಾಟಾ ಸೇರಿದಂತೆ ದೇಶದ ವಿವಿಧ ಪ್ರಮುಖ ಉದ್ಯಮ ಸಂಸ್ಥೆಗಳು ಉತ್ತರ ಪ್ರದೇಶದಲ್ಲಿ ಸಹ್ರಸ್ರಾರು ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿವೆ.

ಇಲ್ಲಿ ನಡೆಯುತ್ತಿರುವ ಮೂರು ದಿನಗಳ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ರ ಮೊದಲ ದಿನದಂದು ಉತ್ತರ ಪ್ರದೇಶಕ್ಕೆ ಈ ಹೂಡಿಕೆ ಪ್ರಸ್ತಾಪಗಳನ್ನು ಪ್ರಕಟಿಸಿವೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮುಖೇಶ್ ಅಂಬಾನಿ, ಮುಂಬರುವ ನಾಲ್ಕು ವರ್ಷಗಳ 75,000 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಹೂಡಿಕೆಯಿಂದ ಸುಮಾರು ಒಂದು ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಈ ವೇಳೆ ಮಾತನಾಡಿದ ಅಂಬಾನಿ, ಮುಂದಿನ ಐದು ವರ್ಷಗಳಲ್ಲಿ ರಾಜ್ಯವು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ.

ರಿಲಯನ್ಸ್ ಯುಪಿಯಲ್ಲಿ 10 ಗಿಗಾವ್ಯಾವಟ್‌ ನವೀಕರಿಸಬಹುದಾದ ಇಂಧನ ಘಟಕವನ್ನು ನಿರೀಕ್ಷೆಯಿದೆ, ಇದು ರಾಜ್ಯದಲ್ಲಿ ಇದುವರೆಗಿನ ಅತಿದೊಡ್ಡ ನವೀಕರಿಸಬಹುದಾದ ಇಂಧನ ಯೋಜನೆಯಾಗಿದೆ. ಕಂಪನಿಯು ಯುಪಿಯಲ್ಲಿ ಜೈವಿಕ ಅನಿಲ ಇಂಧನ ವ್ಯವಹಾರ ಆರಂಭಿಸುವುದಾಗಿ ಘೋಷಿಸಿದೆ.

ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಕುಮಾರ ಮಂಗಳಂ ಬಿರ್ಲಾ ಅವರು ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿ , ರಾಜ್ಯದಲ್ಲಿ ಸಿಮೆಂಟ್, ಲೋಹಗಳು, ಹಣಕಾಸು ಸೇವೆಗಳು ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ 25,000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು