News Karnataka Kannada
Monday, April 29 2024
ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ ಕೆಎಫ್‌ಸಿ ಮಾಂಸಾಹಾರ ಮಾರಾಟಕ್ಕೆ ಅವಕಾಶ ?

ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಬಳಿಕ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಅಲ್ಲದೆ ಇಲ್ಲಿ ವ್ಯವಹಾರಗಳು ಗರಿಗೆದರಿವೆ ಈ ನಡುವೆ ದೊಡ್ಡ ದೊಡ್ಡ ಕಂಪೆನಿಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಮುಂದಾಗಿದೆ.
Photo Credit : News Kannada

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಬಳಿಕ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಅಲ್ಲದೆ ಇಲ್ಲಿ ವ್ಯವಹಾರಗಳು ಗರಿಗೆದರಿವೆ ಈ ನಡುವೆ ದೊಡ್ಡ ದೊಡ್ಡ ಕಂಪೆನಿಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಮುಂದಾಗಿದೆ.

ಇದರ ನಡುವೆ ಅಯೋಧ್ಯೆ ನಗರಿಯಲ್ಲಿ ಕೆಂಟುಕಿ ಫ್ರೈಡ್ ಚಿಕನ್ (ಕೆಎಫ್‌ಸಿ) ತನ್ನ ಶಾಖೆಯನ್ನು ತೆರೆಯಲು ಹೆಚ್ಚಿನ ಉತ್ಸಾಹ ತೋರಿದ್ದು ಇದಕ್ಕೆ ಇಲ್ಲಿನ ಜಿಲ್ಲಾಡಳಿತ ಕೆಲವೊಂದು ಷರತ್ತನ್ನು ವಿಧಿಸಿದ್ದು ಇದನ್ನು ಒಪ್ಪುವುದಾದರೆ ಮಾತ್ರ ಶಾಖೆ ತೆರೆಯಲು ಅನುಮತಿ ನೀಡುವುದಾಗಿ ಜಿಲ್ಲಾಡಳಿತ ಹೇಳಿದೆ.

ಅದರಂತೆ ಅಯೋಧ್ಯೆ ಪವಿತ್ರ ಕ್ಷೇತ್ರದಲ್ಲಿ ಮಾಂಸಾಹಾರ ಮಳಿಗೆಗಳಿಗೆ ಜಿಲ್ಲಾಡಳಿತದಿಂದ ಅವಕಾಶ ಇಲ್ಲ ಹಾಗಾಗಿ ಕೆಎಫ್‌ಸಿ ಕೂಡ ಇಲ್ಲಿ ಸಸ್ಯಾಹಾರಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದಾದರೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ ಇದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದ ಕೆಎಫ್‌ಸಿ ಅಯೋಧ್ಯೆಯಲ್ಲಿ ತನ್ನ ನೂತನ ಶಾಖೆಯನ್ನು ತೆರೆಯಲು ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು