ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಬಳಿಕ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಅಲ್ಲದೆ ಇಲ್ಲಿ ವ್ಯವಹಾರಗಳು ಗರಿಗೆದರಿವೆ ಈ ನಡುವೆ ದೊಡ್ಡ ದೊಡ್ಡ ಕಂಪೆನಿಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಮುಂದಾಗಿದೆ.
ಇದರ ನಡುವೆ ಅಯೋಧ್ಯೆ ನಗರಿಯಲ್ಲಿ ಕೆಂಟುಕಿ ಫ್ರೈಡ್ ಚಿಕನ್ (ಕೆಎಫ್ಸಿ) ತನ್ನ ಶಾಖೆಯನ್ನು ತೆರೆಯಲು ಹೆಚ್ಚಿನ ಉತ್ಸಾಹ ತೋರಿದ್ದು ಇದಕ್ಕೆ ಇಲ್ಲಿನ ಜಿಲ್ಲಾಡಳಿತ ಕೆಲವೊಂದು ಷರತ್ತನ್ನು ವಿಧಿಸಿದ್ದು ಇದನ್ನು ಒಪ್ಪುವುದಾದರೆ ಮಾತ್ರ ಶಾಖೆ ತೆರೆಯಲು ಅನುಮತಿ ನೀಡುವುದಾಗಿ ಜಿಲ್ಲಾಡಳಿತ ಹೇಳಿದೆ.
ಅದರಂತೆ ಅಯೋಧ್ಯೆ ಪವಿತ್ರ ಕ್ಷೇತ್ರದಲ್ಲಿ ಮಾಂಸಾಹಾರ ಮಳಿಗೆಗಳಿಗೆ ಜಿಲ್ಲಾಡಳಿತದಿಂದ ಅವಕಾಶ ಇಲ್ಲ ಹಾಗಾಗಿ ಕೆಎಫ್ಸಿ ಕೂಡ ಇಲ್ಲಿ ಸಸ್ಯಾಹಾರಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದಾದರೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ ಇದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದ ಕೆಎಫ್ಸಿ ಅಯೋಧ್ಯೆಯಲ್ಲಿ ತನ್ನ ನೂತನ ಶಾಖೆಯನ್ನು ತೆರೆಯಲು ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.