ವಾರಣಾಸಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಇಂದು(ಆ.27) ಹೇಳಿದ್ದಾರೆ.
ರೈ ಅವರು ವಾರಣಾಸಿಯಿಂದ ಮೂರು ಲೋಕಸಭಾ ಚುನಾವಣೆಗಳಲ್ಲಿ ಸೋತಿದ್ದಾರೆ. 2014 ಮತ್ತು 2019 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತು 2009ರಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಬಿಜೆಪಿಯ ಮುರಳಿ ಮನೋಹರ್ ಜೋಶಿ ವಿರುದ್ಧ ಸೋತಿದ್ದರು.
ಪ್ರಿಯಾಂಕಾ ಗಾಂಧಿ ಬಯಸಿದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಮತ್ತು ಅವರು ಗೆಲ್ಲಲು ನಾವು ಶಕ್ತಿಮೀರಿ ಶ್ರಮಿಸುತ್ತೇವೆ. ಮೋದಿ ಅವರಿಗೆ ಪ್ರಿಯಾಂಕಾ ಪ್ರಬಲರಾಗಿದ್ದಾರೆ ಎಂಬ ಸಂದೇಶ ರವಾನಿಸಲಾಗುವುದು ಎಂದರು. ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಹೇಳಿದ್ದಾರೆ.