ಲಖನೌ: ಜನರು ಹೋಳಿ ಆಡುವಾಗ ಬಣ್ಣ ಸೋಕುತ್ತದೆ ಎಂದು ಉತ್ತರ ಪ್ರದೇಶದ ಅಲಿಗಢದ ಮಸೀದಿಯೊಂದಕ್ಕೆ ಟಾರ್ಪಾಲು ಹೊದಿಕೆ ಹಾಕಿ ಮುಚ್ಚಿದ್ದಾರೆ. ಹೋಳಿ ದಿನದಂದು ಪೊಲೀಸ್ ಆಡಳಿತದ ಸೂಚನೆಯ ಮೇರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಲಿಗಢದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿರುವ ಅಬ್ದುಲ್ ಕರೀಂ ಮಸೀದಿಯನ್ನು ಹೋಳಿ ಸಮಯದಲ್ಲಿ ಬಣ್ಣಗಳಿಂದ ಕಾಪಾಡಲು ಕಪ್ಪು ಟಾರ್ಪಲಿನ್ನಿಂದ ಮುಚ್ಚಲಾಗಿದೆ.
ವಿಶೇಷವೆಂದರೆ, ಕಳೆದ ಕೆಲವು ವರ್ಷಗಳಿಂದ ಹೋಳಿಯಂದು ಸೂಕ್ಷ್ಮ ಪ್ರದೇಶದಲ್ಲಿರುವ ಮಸೀದಿಯನ್ನು ರಾತ್ರಿಯಿಡೀ ಟಾರ್ಪಾಲಿನ್ನಿಂದ ಮುಚ್ಚಲಾಗುತ್ತಿದೆ, ಹಾಗಾಗಿ ಹೋಳಿ ನಿಮಿತ್ತ ಯಾರೂ ಮಸೀದಿಯ ಮೇಲೆ ಬಣ್ಣ ಎರಚುವುದಿಲ್ಲ. ಆಡಳಿತದ ಸೂಚನೆಯ ಮೇರೆಗೆ ನಾವು ಮಸೀದಿಗೆ ಟಾರ್ಪಾಲಿನ್ನಿಂದ ಮುಚ್ಚಿದ್ದೇವೆ, ಆದ್ದರಿಂದ ಯಾರೂ ಮಸೀದಿಗೆ ಬಣ್ಣ ಅಥವಾ ಕೊಳಕು ಎಸೆಯಲು ಸಾಧ್ಯವಾಗುವುದಿಲ್ಲ ಎಂದು ಮಸೀದಿಯ ಆಡಳಿತ ಮಂಡಳಿಯ ಹಾಜಿ ಮೊಹಮ್ಮದ್ ಇಕ್ಬಾಲ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದಾಗಿನಿಂದ ಮಸೀದಿಯನ್ನು ಟಾರ್ಪಾಲಿನ್ನಿಂದ ಮುಚ್ಚಲಾಗುತ್ತಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…