ಲಕ್ನೋ: ಇಲ್ಲಿನ ಎಸ್ಟಿಎಫ್ ಮತ್ತು ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋ (ಡಬ್ಲ್ಯುಸಿಸಿಬಿ) ಜಂಟಿ ತಂಡ ಕಾರ್ಯಾಚರಣೆ ನಡೆಸಿ 108 (ಇಂಡಿಯನ್ ರೂಫ್ ಟರ್ಟಲ್ಸ್) ಆಮೆಗಳನ್ನು ರಕ್ಷಿಸಿದೆ.
ಅಲ್ಲದೆ ಕಳ್ಳಸಾಗಣಿಕೆದಾರನ ಬಳಿಯಿದ್ದ ಎರಡು ಮೊಬೈಲ್ ಫೋನ್ ಮತ್ತು ಸ್ಕೂಟರ್ ಅನ್ನು ತಂಡ ವಶಪಡಿಸಿಕೊಂಡಿದೆ. ಆರೋಪಿ ರಿಂಕು ಕಶ್ಯಪ್ ಬಿಹಾರದ ಕಳ್ಳಸಾಗಾಣಿಕೆದಾರರೊಂದಿಗೆ ಸೇರಿ ಆಮೆಗಳನ್ನು ಸಾಗಾಟ ಮಾಡಲು ಯೋಜನೆ ಮಾಡಿದ್ದು, ಈ ವೇಳೆ ದಾಳಿ ನಡೆಸಿದ್ದ ತಂಡ ದುಷ್ಕರ್ಮಿಗಳನ್ನು ಬಂಧಿಸಿದೆ.
“ಗೋಮತಿ ನದಿಯ ತಟದ ಕಾಕೋರಿ ಮತ್ತು ಸೀತಾಪುರದ ಮೀನುಗಾರರಿಂದ ತಲಾ 200 ರೂ.ಗೆ ಆಮೆಗಳನ್ನು ಖರೀದಿಸಿದೆ ಎಂದು ಕಶ್ಯಪ್ ಹೇಳಿದ್ದಾರೆ. ಅವರು ಆಮೆಗಳನ್ನು ಬಂಗಾಳ, ಬಿಹಾರ, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಆಮೆಗಳನ್ನುತಲಾ 300 ರೂ.ಗೆ ಮಾರಾಟ ಮಾಡಲು ಯೋಜನೆ ನಡೆಸಿದ್ದರು ಎಂದು ಅವರು ತಿಳಿಸಿದ್ದಾರೆ.
ವಿದೇಶಗಳಲ್ಲಿ ಆಮೆಗಳ ಮಾಂಸಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲಕ ವಿದೇಶಗಳಿಗೆ ಆಮೆಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…
ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್ ಹೆಚ್ಚುವರಿಯಾಗಿ ಬಳಕೆಯಾಗಿದೆ.
ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…
ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.