ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೋಟೆಲ್ ನಲ್ಲಿ ಸಂಭವಿಸಿದ ಬೆಂಕಿ ದುರಂತದ ಬಗ್ಗೆ ಲಕ್ನೋದ ವಿಭಾಗೀಯ ಆಯುಕ್ತರು ಮತ್ತು ಪೊಲೀಸ್ ಆಯುಕ್ತರಿಂದ ಜಂಟಿ ತನಿಖೆಗೆ ಸೋಮವಾರ ಆದೇಶಿಸಿದ್ದಾರೆ.
ಗಾಯಗೊಂಡವರಿಗೆ ಸೂಕ್ತ ಮತ್ತು ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.
ರಾಜ್ಯ ರಾಜಧಾನಿಯ ಹಜರತ್ಗಂಜ್ ಪ್ರದೇಶದಲ್ಲಿರುವ ಲೆವಾನಾ ಹೋಟೆಲ್ ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ 20 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.