ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ 12 ಅಡಿ ಕಂಚಿನ ಪ್ರತಿಮೆಯನ್ನು ಲಕ್ನೋದ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಭಾನುವಾರ ಅನಾವರಣಗೊಳಿಸಿದರು.
ರಾಮ ಮಂದಿರ ಚಳವಳಿಯಲ್ಲಿ ದಿವಂಗತ ಕಲ್ಯಾಣ್ ಸಿಂಗ್ ಅವರ ಪಾತ್ರವನ್ನು ಮುಖ್ಯಮಂತ್ರಿ ಸ್ಮರಿಸಿದರು. ದಿವಂಗತ ಕಲ್ಯಾಣ್ ಸಿಂಗ್ ಅವರ ನೇತೃತ್ವದಲ್ಲಿ ಅಯೋಧ್ಯೆಯ ಭವ್ಯ ರಾಮ ಮಂದಿರಕ್ಕೆ ಅಡಿಪಾಯ ಹಾಕಲಾಯಿತು ಎಂದು ಅವರು ಹೇಳಿದರು. ರಾಮಮಂದಿರ ನಿರ್ಮಾಣ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ.
ದಿವಂಗತ ಕಲ್ಯಾಣ್ ಸಿಂಗ್ ಅವರ ಭವ್ಯ ಪ್ರತಿಮೆಯನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ (ಕೆಜಿಎಂಯು) ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
ಕಲ್ಯಾಣ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಕಳೆದ ವರ್ಷ ಆಗಸ್ಟ್ ೨೧ ರಂದು ನಿಧನರಾದರು. ಲಕ್ನೋದ ಕ್ಯಾನ್ಸರ್ ಇನ್ಸ್ಟಿಟ್ಯೂಟ್ಗೆ ಅವರ ಹೆಸರನ್ನು ಇಡಲಾಗಿದೆ.