ಮೈನ್ ಪುರಿ: ಸಮಾಜವಾದಿ ಪಕ್ಷದ (ಎಸ್ ಪಿ) ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್ ಗಿಂತಲೂ ಹೆಚ್ಚು ದೂರ ಎಳೆದೊಯ್ದ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ನಡೆದಿದೆ.
ಈ ಪ್ರದೇಶದಲ್ಲಿ ಯಾದವ್ ಎಸ್ಪಿ ಜಿಲ್ಲಾ ಅಧ್ಯಕ್ಷರಾಗಿದ್ದಾರೆ.
ಭಾನುವಾರ ರಾತ್ರಿ ಅಪಘಾತದ ಸಮಯದಲ್ಲಿ ಅವರು ಕಾರಿನಲ್ಲಿ ಒಬ್ಬರೇ ಇದ್ದರು ಮತ್ತು ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ದೂರು ದಾಖಲಾಗಿದ್ದು, ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
“ಈ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಮಣಿಪುರ ಎಸ್ಪಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.