ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಮ್ಮ ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಭಾನುವಾರ ನೇಮಕ ಮಾಡಿದ್ದಾರೆ.
ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆಯನ್ನು ಮಾಯಾವತಿ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಉದಯ ಸಿಂಗ್ ತಿಳಿಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸಿದ್ದ ಆಕಾಶ್ ಆನಂದ ಅವರು ಮಾಯಾವತಿಯ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ.