ಲಕ್ನೋ: ಧಾರ್ಮಿಕ ನಗರಗಳ ಪ್ರತಿಷ್ಠಿತ ದೇವಾಲಯಗಳ ಬಳಿ ಯಾವುದೇ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಗೋರಖ್ಪುರ, ವಾರಣಾಸಿ ಮತ್ತು ಮಥುರಾ-ವೃಂದಾವನದಂತಹ ಧಾರ್ಮಿಕ ನಗರಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುಲು ಈ ತಿರ್ಮಾನವನ್ನು ಕೈಗೊಳ್ಳಲಾಗಿದೆ. ದೇವಾಲಯಗಳ ಎತ್ತರವನ್ನು ಮೀರಿದ ಯಾವುದೇ ರೀತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಬಾರದೆಂದು ಆಡಳಿತ ವಲಯಕ್ಕೆ ಸೂಚಿಸಿದ್ದಾರೆ.
ಧಾರ್ಮಿಕ ನಗರಗಳ ದೇವಾಲಯಗಳು ಮಹತ್ವದ ರಚನೆಗಳಿಗೆ ಹೆಸರುವಾಸಿಯಾಗಿವೆ. ಈ ದೇವಾಲಯಗಳು ಮತ್ತು ಪವಿತ್ರ ಕಟ್ಟಡಗಳ ಎತ್ತರವನ್ನು ಮೀರಿದ ರಚನೆಗಳಿಗೆ ಅನುಮತಿಸಬಾರದು ಎಂದು ಹೇಳಿದರು.