ನೋಯ್ಡಾ: ನೋಯ್ಡಾದಲ್ಲಿ ಭಾನುವಾರ ಸಂಭವಿಸಿದ ಬಸ್ ಮತ್ತು ಕಾರು ಅಪಘಾತದಲ್ಲಿಇಬ್ಬರು ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಉತ್ತರ ಪ್ರದೇಶದ ಬುಲಂದ್ಶಹರ್ ನಿವಾಸಿಗಳಾದ ಪುರುಷೋತ್ತಮ್ (45) ಮತ್ತು ರಿಂಕು (35) ಎಂದು ಗುರುತಿಸಲಾಗಿದೆ.
ಅಧಿಕಾರಿಯ ಪ್ರಕಾರ, ಮೊಹಮ್ಮದ್ಪುರ ಗ್ರಾಮದ ಬಳಿಯ ಝಜಾರ್-ರಬುಪುರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಝಾಜಾರ್ನಿಂದ ರಬುಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರೆನಾಲ್ಟ್ ಟ್ರೈಬರ್ಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದ ತಕ್ಷಣ, ಬಸ್ಸಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಇನ್ನೂ ಬಂಧಿಸಲಾಗಿಲ್ಲ. “ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಪುರುಷೋತ್ತಮ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಗರದ ಕೈಲಾಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಎರಡನೇ ವ್ಯಕ್ತಿ ಸಾವನ್ನಪ್ಪಿದ್ದಾರೆ .ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ” ಎಂದು ಅಧಿಕಾರಿ ಹೇಳಿದರು.