ಅಯೋಧ್ಯೆ: ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದೆ. ಪ್ರತಿಷ್ಠಾಪನಾ ಕಾರ್ಯಕ್ರಮದಂದು ಕೇವಲ 5 ಜನರಿಗೆ ಮಾತ್ರ ರಾಮಮಂದಿರದ ಗರ್ಭಗುಡಿಗೆ ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ.
ಈ ಐದು ಜನರನ್ನು ಹೊರತುಪಡಿಸಿ ಯಾರಿಗೂ ಗರ್ಭಗುಡಿ ಒಳಗೆ ಪ್ರವೇಶ ಮಾಡಲು ಅವಕಾಶವಿಲ್ಲ. ಅಲ್ಲದೆ ಈ ಸಂದರ್ಭದಲ್ಲಿ ಗರ್ಭಗುಡಿಯ ಬಾಗಿಲು ಸಹ ಮುಚ್ಚಲಿದೆ ಎನ್ನಲಾಗಿದೆ.
ಗರ್ಭಗುಡಿ ಒಳಗೆ ನರೇಂದ್ರ ಮೋದಿ ಸಹಿತ ಐವರಷ್ಟೇ ಒಳಗೆ ಪ್ರವೇಶಿಸಬಹುದಾಗಿದೆ. ಪ್ರಧಾನಿ ಜೊತೆಗೆ ಯುಪಿ ಗವರ್ನರ್ ಆನಂದಿ ಬೆನ್ ಪಟೇಲ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ರಾಮಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ಅವರು ಮಾತ್ರ ಇರುತ್ತಾರೆ.