News Karnataka Kannada
Monday, April 29 2024
ಉತ್ತರ ಪ್ರದೇಶ

ಎಲ್ಲೆಲ್ಲಿ ಮಹಾದೇವನ ಆಶೀರ್ವಾದವಿದೆಯೋ ಅಲ್ಲಿ ಭೂಮಿ ಸುಭಿಕ್ಷವಾಗಿರುತ್ತದೆ: ಮೋದಿ

ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಸಾಮಾಜಿಕ ಮಾಧ್ಯಮ ಎಕ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿದ್ದಾರೆ.
Photo Credit : News Kannada

ವಾರಾಣಸಿ: ಇಂದು ಕಾಶಿಯ ಶಕ್ತಿ ಮತ್ತು ಸ್ವರೂಪ ಮತ್ತೆ ಸುಧಾರಿಸುತ್ತಿದೆ. ಕಾಶಿಯಲ್ಲಿ ಇದನ್ನು ಮಹಾದೇವನೇ ಮಾಡಿಸುತ್ತಿದ್ದಾನೆ. ಕಾಶಿಯು ಜ್ಞಾನದ ರಾಜಧಾನಿಯಾಗಿದೆ. ಕಾಶಿಯ ಸ್ವರೂಪ ಮತ್ತಷ್ಟು ಸುಂದರವಾಗಿದೆ, ಮಹಾದೇವನಿಗೆ ಈಗ ಖುಷಿಯಾಗಿದೆ ಎಲ್ಲೆಲ್ಲಿ ಮಹಾದೇವನ ಆಶೀರ್ವಾದವಿದೆಯೋ ಅಲ್ಲಿ ಭೂಮಿ ಸುಭಿಕ್ಷವಾಗಿರುತ್ತದೆ  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಾರಾಣಸಿಯಲ್ಲಿ ಬಿಎಚ್‌ಯುನಲ್ಲಿ ನಡೆದ ‘ಸಂಸದ್ ಸಂಸ್ಕೃತ ಸ್ಪರ್ಧೆ’ಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದ ನಂತರ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಕೂಡ ಉಪಸ್ಥಿತರಿದ್ದರು.

ಕಾಶಿಯನ್ನು ಇನ್ನಷ್ಟು ಸುಂದರಗೊಳಿಸಲಾಗುವುದು. ಇಲ್ಲಿ ರಸ್ತೆಗಳನ್ನು, ಸೇತುವೆಗಳನ್ನು ನಿರ್ಮಿಸಲಾಗುವುದು. ಕಟ್ಟಡಗಳನ್ನು ಸಹ ನಿರ್ಮಿಸಲಾಗುವುದು. ಇವೆಲ್ಲವುಗಳಿಗಿಂತಲೂ ಮೊದಲು ನಾನು ಇಲ್ಲಿನ ಜನರನ್ನು ಸುಂದರಗೊಳಿಸಬೇಕು, ಪ್ರತಿ ಮನಸ್ಸನ್ನು ಸುಂದರಗೊಳಿಸಬೇಕು. ನಾನು ಬರೇ ಸೇವಕನಷ್ಟೇ. ಒಬ್ಬ ಸೇವಕನಾಗಿ ಈ ಎಲ್ಲ ಕೆಲಸಗಳನ್ನು ಮಾಡಲು ಪ್ರಯತ್ನಿಸುತ್ತಿದ್ದೇನೆ ಎಂದು ಮೋದಿ ಹೇಳಿದರು.

‘ನಮ: ಪಾರ್ವತಿ ಪತಯೇ ಹರ ಹರ ಮಹಾದೇವ್’ ಎಂಬ ಘೋಷಣೆಯೊಂದಿಗೆ ಮೋದಿ ಭಾಷಣ ಆರಂಭಿಸಿದರು. ಕಾಶಿ ನಮ್ಮ ನಂಬಿಕೆಯ ತೀರ್ಥಕ್ಷೇತ್ರ ಮಾತ್ರವಲ್ಲ, ಇದು ಭಾರತದ ಸನಾತನ ಪ್ರಜ್ಞೆಯ ಜಾಗೃತಿ ಕೇಂದ್ರವಾಗಿದೆ. ಭಾರತದ ಸಮೃದ್ಧಿಯ ಕಥೆಯನ್ನು ಪ್ರಪಂಚದಾದ್ಯಂತ ಹೇಳುತ್ತಿದ್ದ ಕಾಲವೊಂದಿತ್ತು. ಅದರ ಹಿಂದೆ ಭಾರತದ ಆರ್ಥಿಕ ಶಕ್ತಿ ಮಾತ್ರವಲ್ಲ, ಹಿಂದೆ ನಮ್ಮ ಸಾಂಸ್ಕೃತಿಕ ಏಳಿಗೆ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಏಳಿಗೆಯೂ ಇತ್ತು. ಕಾಶಿಯಂತಹ ನಮ್ಮ ಯಾತ್ರಾ ಸ್ಥಳಗಳು ಮತ್ತು ವಿಶ್ವನಾಥ ಧಾಮದಂತಹ ನಮ್ಮ ದೇವಾಲಯಗಳು ರಾಷ್ಟ್ರದ ಪ್ರಗತಿಗೆ ತ್ಯಾಗದ ಸ್ಥಳಗಳಾಗಿವೆ ಎಂದು ಮೋದಿ ಹೇಳಿದರು.

ಪುಸ್ತಕ ಬಿಡುಗಡೆ: ಕಾರ್ಯಕ್ರಮದಲ್ಲಿ, ಕಾಶಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಎರಡು ಪುಸ್ತಕಗಳನ್ನೂ ಬಿಡುಗಡೆ ಮಾಡಲಾಯಿತು. ಕಳೆದ 10 ವರ್ಷಗಳಲ್ಲಿ ಕಾಶಿಯಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕಾಶಿಯನ್ನು ಇನ್ನಷ್ಟು ಸುಂದರಗೊಳಿಸಲಾಗುತ್ತಿದೆ. ಮಾಡಬೇಕಾದ ಕೆಲಸ ಇನ್ನೂ ಸಾಕಷ್ಟಿದೆ ಎಂದು ಮೋದಿ ಹೇಳಿದರು. ಪ್ರಾಚೀನವಾದ ಕಾಶಿಯ ಗುರುತನ್ನು ಯುವ ಪೀಳಿಗೆ ಜವಾಬ್ದಾರಿಯುತವಾಗಿ ಬಲಪಡಿಸುತ್ತಿದೆ. ಇದು ಹೃತ್ಪೂರ್ವಕ ಸಂತೃಪ್ತಿಯನ್ನು ನೀಡುತ್ತದೆ ಮತ್ತು ಹೆಮ್ಮೆಯ ಭಾವನೆಯನ್ನು ನೀಡುತ್ತದೆ. ಅಮೃತ ಕಾಲ್ನಲ್ಲಿ ಎಲ್ಲಾ ಯುವಕರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವನ್ನು ನೀಡಿದೆ ಎಂದು ಪ್ರಧಾನಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು