ಲಕ್ನೋ: ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.
ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್ಟಿಐ ಪ್ರತಿಕ್ರಿಯೆಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್ ಅವರು, ” ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.
ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದ್ದೇನೆ ಎಂದಿದ್ದಾರೆ.