ಲಕ್ನೋ: ಬರ್ಗಾಡಿ ಕಲಾನ್ ಗ್ರಾಮದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ಈ ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಮೆಯನ್ನು ದುರಸ್ತಿ ಮಾಡಲು ಅವಕಾಶ ನೀಡುವ ಮೊದಲು ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಅಂಬೇಡ್ಕರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸುವವರೆಗೆ, ಪ್ರತಿಮೆಯನ್ನು ದುರಸ್ತಿ ಮಾಡಲು ಅವಕಾಶ ನೀಡುವುದಿಲ್ಲ. ವಿಗ್ರಹವನ್ನು ಯಾವುದೇ ರೀತಿಯಲ್ಲಿ ಮುಟ್ಟುವುದಿಲ್ಲ. ಏಕೆಂದರೆ ಇಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗೆ ಹಾಕಲಾಗುವುದಿಲ್ಲ.ಇದೇ ಪ್ರತಿಮೆಯನ್ನು ಸುಮಾರು 10 ವರ್ಷಗಳ ಹಿಂದೆಯೂ ಧ್ವಂಸಗೊಳಿಸಲಾಗಿದೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.