ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಶುಕ್ರವಾರ (ಜನವರಿ 19) ಇರಿಸಲಾಗಿರುವ ಮಂದಸ್ಮಿತ ರಾಮಲಲ್ಲಾನ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಇದರ ಬೆನ್ನಲ್ಲೇ ಬಾಲರಾಮನ ವಿಗ್ರಹದ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, “ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಫೋಟೊ ಅಸಲಿ ಅಲ್ಲ” ಆದರೆ ರಾಮನ ಕಣ್ಣುಗಳು ಗೋಚರಿಸುವ ವಿಗ್ರಹವು ನಿಜವಾದ ವಿಗ್ರಹವಲ್ಲ. ಒಂದು ವೇಳೆ ಕಣ್ಣುಗಳು ಗೋಚರಿಸಿದರೆ, ಆ ಕಣ್ಣುಗಳನ್ನು ಯಾರು ತೋರಿಸಿದರು ಮತ್ತು ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆಗುತ್ತಿವೆ ಎಂಬುದನ್ನು ತನಿಖೆ ಮಾಡಬೇಕುಎಂದು ಹೇಳಿದ್ದಾರೆ.