News Karnataka Kannada
Monday, April 29 2024
ಉತ್ತರ ಪ್ರದೇಶ

ಅಯೋಧ್ಯೆ ರಾಮಮಂದಿರಕ್ಕೆ ಯಾರು ಎಷ್ಟು ಕೋಟಿ ಕೊಟ್ರು?

ಅಯೋಧ್ಯೆಯಲ್ಲಿ  ರಾಮಲಲ್ಲಾನನ್ನು ನೋಡಲು ಅದೆಷ್ಟೋ ದೇಶ ವಿದೇಶಗಳಲ್ಲಿ ಜನ ಕಾಯುತ್ತಿದ್ದಾರೆ.  22ರಂದು ಉದ್ಘಾಟನೆ ಹಾಗೂ ನಂತರದಲ್ಲಿ ಸಾರ್ವಜನಿಕರಿಗೆ ಶ್ರೀರಾಮನ ದರ್ಶನಕ್ಕೂ ಅವಕಾಶಕಲ್ಪಿಸಿರುವ ಹಿನ್ನೆಲೆ ಧಾರವಾಡದಿಂದ ನಾಲ್ವರು ಯುವಕರು ತಮ್ಮ ಎರಡು ಬೈಕ್‌ಗಳ ಮೂಲಕ ಶ್ರೀರಾಮನ ದರ್ಶನದ ಸಾಹಸಕ್ಕೆ ಕೈ ಹಾಕಿದ್ದಾರೆ.
Photo Credit : News Kannada

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಇದುವರೆಗೂ ಬರೋಬ್ಬರಿ 5 ಸಾವಿರ ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿರೋ ಮಾಹಿತಿ ಬಿಡುಗಡೆಯಾಗಿದೆ.

ರಾಮಮಂದಿರ ನಿರ್ಮಾಣಕ್ಕೆ ಆರಂಭದಲ್ಲಿ ಟ್ರಸ್ಟ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹಿಸಲಾಗಿತ್ತು. ಸ್ವಪ್ರೇರಣೆಯಿಂದ ರಾಮಭಕ್ತರು ಅಯೋಧ್ಯೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದೇಣಿಗೆ ನೀಡುತ್ತಿದ್ದಾರೆ.

ರಾಮಕಥಾ ಖ್ಯಾತಿಯ ಮುರಾರಿ ಬಾಪು ಅವರೇ 11 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಮುರಾರಿ ಬಾಪು ಅನುಯಾಯಿಗಳಿಂದ 8 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ನೀಡಲಾಗಿದೆ.  ಸೂರತ್‌ನ ವಜ್ರ ಉದ್ಯಮಿ ಗೋವಿಂದಭಾಯಿ ಡೋಲಾಕಿಯವರು ಸಹ 11 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.

ಇದಿಷ್ಟೇ ಅಲ್ಲದೇ ಟಾಟಾ ಗ್ರೂಪ್‌, ಸೇರಿದಂತೆ ದೇಶದ ವಿವಿಧ ಖ್ಯಾತ ಉದ್ಯಮಿಗಳಿಂದಲೂ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 2.5 ಕೋಟಿ ರೂಪಾಯಿವರೆಗೂ ದೇಣಿಗೆ ಸಂಗ್ರಹವಾಗುತ್ತಿದೆ.

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ, ರಾಜ್ಯ ಸರ್ಕಾರದಿಂದ ಹಣ ಪಡೆದಿಲ್ಲ. ಭಕ್ತಾಧಿಗಳು ನೀಡಿರುವ ದೇಣಿಗೆ ಹಣದಿಂದಲೇ 3 ಎಕರೆ ಜಾಗದಲ್ಲಿ ಮುಖ್ಯ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ. ಉಳಿದ 67 ಎಕರೆ ಜಾಗದಲ್ಲಿ ವಿವಿಧ ದೇವಾಲಯ, ಭಕ್ತರಿಗೆ ಸೌಲಭ್ಯ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು