News Karnataka Kannada
Wednesday, May 01 2024
ಉತ್ತರ ಪ್ರದೇಶ

ರಾಮಲಲ್ಲಾ ಬೆಳ್ಳಿ ನಾಣ್ಯ ಬಿಡುಗಡೆ : ಸಾರ್ವಜನಿಕರ ಖರೀದಿಗೆ ಸಾರ್ಕಾರದ ವಿನೂತನ ವ್ಯವಸ್ಥೆ

ಇದೇ ವರ್ಷದ 22ರಂದು ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆ ಅತಿ ಅದ್ಧೂರಿಯಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರಿತು.
Photo Credit : NewsKarnataka

ಅಯೋಧ್ಯ:  ಇದೇ ವರ್ಷದ 22ರಂದು ರಾಮ ಜನ್ಮಭೂಮಿಯಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆ ಅತಿ ಅದ್ಧೂರಿಯಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರಿತು. ಇದೀಗ ರಾಮಲಲ್ಲಾ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನಾ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು 50 ಗ್ರಾಂ ಇರುವ ಬೆಳ್ಳಿ ನಾಣ್ಯವನ್ನು ಸಾರ್ವಜನಿಕ ಮಾರಾಟಕ್ಕೆ ಪರಿಚಯಿಸಿದೆ. ಈ ಬೆಳ್ಳಿ ನಾಣ್ಯಗಳ ಮಾರಾಟವು ಸೀಮಿತ ಅವಧಿಗೆ ಮಾತ್ರ ಲಭ್ಯವಿದ್ದು, 5,860 ರೂ. ಬೆಲೆ ಹೊಂದಿದೆ. ಇತ್ತೀಚೆಗೆ ಫೆಬ್ರವರಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ನಾಣ್ಯಗಳನ್ನು ಅನಾವರಣಗೊಳಿಸಿದ್ದರು.

ಈ ನಾಣ್ಯದಲ್ಲಿ ಮುಖ್ಯವಾಗಿ ರಾಮಲಲ್ಲಾ ಮತ್ತು ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯನ್ನು ಕಾಣಬಹುದು.ಮಲಲ್ಲಾರ ನಾಣ್ಯದ ಜೊತೆಗೆ, ಬುದ್ಧನ ಜ್ಞಾನೋದಯವನ್ನು ಪ್ರತಿನಿಧಿಸುವ ದ್ವಿ-ಲೋಹದ ಹೊದಿಕೆಯ ಸ್ಮಾರಕ ನಾಣ್ಯವನ್ನು ಸಹ ಸೀತಾರಾಮನ್​ ಅವರು ಅನಾವರಣಗೊಳಿಸಿದ್ದರು. ಬುದ್ಧ ಮತ್ತು ಸ್ತೂಪದ ಆಕ್ಸಿಡೀಕೃತ ಚಿತ್ರಗಳನ್ನು ಮತ್ತು ಅಳಿವಿನಂಚಿನಲ್ಲಿರುವ ಒಂದು ಕೊಂಬಿನ ಘೇಂಡಾಮೃಗವನ್ನು ಒಳಗೊಂಡ ನಾಣ್ಯವನ್ನು ಸಹ ಬಿಡುಗಡೆ ಮಾಡಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು