News Karnataka Kannada
Wednesday, May 08 2024
ಉತ್ತರ ಪ್ರದೇಶ

ಉದಯನಿಧಿ ಸ್ಟಾಲಿನ್ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂ. ಘೋಷಿಸಿದ ಸಂತ ಯಾರು ಗೊತ್ತಾ

ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ
Photo Credit : News Kannada

ಅಯೋಧ್ಯೆ: ಅಯೋಧ್ಯೆಯ ಸಂತ ಪರಮಹಂಸ ಆಚಾರ್ಯ ಅವರು ಸೋಮವಾರ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ಸಾಂಕೇತಿಕ ‘ಶಿರಚ್ಛೇದ’ ನಡೆಸಿದರು. ಬಳಿಕ ಅವರ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದರು. ಈ ವೇಳೆ ಮಾತನಾಡಿದ ಆಚಾರ್ಯ, ಸ್ಟಾಲಿನ್ ಶಿರಚ್ಛೇದ ಮಾಡಿದವರಿಗೆ 10 ಕೋಟಿ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸಿದರು.

ಬೇರೆ ಯಾರಾದರೂ ಈ ಕಾರ್ಯ ಮಾಡಲು ವಿಫಲವಾದಲ್ಲಿ ನಾನೇ ಅದನ್ನು ಮಾಡುತ್ತೇನೆ ಎಂದು ತಿಳಿಸಿದರು. ಪರಮಹಂಸರು ಈ ಹಿಂದೆಯೂ ವಿವಾದಿತ ಹೇಳಿಕೆಗಳನ್ನು ನೀಡಿದ್ದು, ಬಿಹಾರದ ಸಚಿವರ ನಾಲಿಗೆ ಕತ್ತರಿಸಿದಲ್ಲಿ 10 ಕೋಟಿ ರೂ. ನೀಡುವುದಾಗಿ ಹಿಂದೊಮ್ಮೆ ಹೇಳಿದ್ದರು. ಅಲ್ಲದೆ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಗೂ ಬೆದರಿಕೆ ಹಾಕಿದ್ದರು.

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮ ಸೊಳ್ಳೆಗಳಿದ್ದಂತೆ, ಡೆಂಗ್ಯೂ ಮತ್ತು ಮಲೇರಿಯಾವನ್ನು ನಿರ್ಮೂಲನೆ ಮಾಡಬೇಕು ಎಂದು ನೀಡಿದ ಹೇಳಿಕೆ ದೇಶದೆಲ್ಲೆಡೆ ವಿವಾದ ಹುಟ್ಟುಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು