ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಶನಿವಾರ ಸೂಪರ್ಸ್ಟಾರ್ ರಜನಿಕಾಂತ್ ಭೇಟಿಯಾದರು. ಇಂದು ಅವರು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿ ರಾಮ್ ಲಲ್ಲಾಗೆ ನಮನ ಸಲ್ಲಿಸಲಿದ್ದಾರೆ.
ಶನಿವಾರ ಸಂಜೆ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಭೆಯಲ್ಲಿ ರಜನಿಕಾಂತ್ ಅವರು ಯೋಗಿ ಆದಿತ್ಯನಾಥ್ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದರು. ನಂತರ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಇತರ ಗಣ್ಯರೊಂದಿಗೆ ಲಕ್ನೋದ ಥಿಯೇಟರ್ವೊಂದರಲ್ಲಿ ಜೈಲರ್ ಚಿತ್ರದ ವಿಶೇಷ ಪ್ರದರ್ಶನದಲ್ಲಿ ಪಾಲ್ಗೊಂಡರು.
ಸ್ವಲ್ಪ ಸಮಯ ಚಲನಚಿತ್ರವನ್ನು ವೀಕ್ಷಿಸಿದ ನಂತರ, ಮೌರ್ಯ ನಂತರ ಅಲ್ಲಿಂದ ತೆರಳಿದರು. ನಾನು ಸ್ವಲ್ಪ ಹೊತ್ತು, ಚಿತ್ರ ವೀಕ್ಷಿಸಿದೆ. ಬೇರೆ ಕಾರ್ಯಕ್ರಮಗಳಿಗೆ ಹಾಜರಾಗಬೇಕಾದ ಅನಿವಾರ್ಯತೆ ಇದ್ದ ಕಾರಣ ಪೂರ್ಣ ಚಲನತ್ರವನ್ನು ವೀಕ್ಷಿಸಲು ಸಾಧ್ಯವಾಗಿಲ್ಲ ಎಂದರು. ರಜನಿಕಾಂತ್ ತಮ್ಮ ಚಿತ್ರ ಜೈಲರ್ ಪ್ರಚಾರ ನಿಮಿತ್ತ ಲಕ್ನೋಗೆ ಭೇಟಿ ನೀಡಿದ್ದಾರೆ. ಚಿತ್ರ ಉತ್ತಮ ಕಲೆಕ್ಷನ್ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ರಜನಿ “ಸಬ್ ಭಗವಾನ್ ಕಿ ದುವಾ ಹೈ…” (ಇದಕ್ಕೆಲ್ಲ ದೇವರ ದಯೆ ಕಾರಣ) ಎಂದು ಹೇಳಿದರು.
ಮೊನ್ನೆಯಷ್ಟೇ ನಟ ಉತ್ತರಾಖಂಡದ ಬದರಿನಾಥ ದೇವಸ್ಥಾನಕ್ಕೆ ಹೋಗಿದ್ದರು. ಶುಕ್ರವಾರ ಜಾರ್ಖಂಡ್ನ ಪ್ರಸಿದ್ಧ ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲದೆ ರಾಂಚಿಯ ‘ಯಾಗೋದ ಆಶ್ರಮ’ದಲ್ಲಿ ಅವರು ಒಂದು ಗಂಟೆಗಳ ಕಾಲ ಧ್ಯಾನಸ್ಥರಾಗಿದ್ದರು.
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…