ಉತ್ತರ ಪ್ರದೇಶ: ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿದ್ದಷ್ಟೇ ಅಲ್ಲದೆ, ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ.
ದುಮರಿಯಾಗಂಜ್ ತಹಸಿಲ್ ಪ್ರದೇಶದ ಕೊಂಕಟಿ ಕ್ರಾಸ್ರೋಡ್ನಲ್ಲಿ ಹಣ ಮತ್ತು ಕೋಳಿ ಕದಿಯುತ್ತಿದ್ದ ಆರೋಪದ ಮೇಲೆ ಕೋಳಿ ಫಾರಂ ನಿರ್ವಾಹಕರು ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ಮಾನವೀಯತೆ ಮರೆತು ನಡೆದುಕೊಂಡಿದ್ದಾರೆ.
ಮಕ್ಕಳನ್ನು ಕಟ್ಟಿ ಹಾಕಿ ಮೊದಲು ಥಳಿಸಿ ನಂತರ ಮೂತ್ರ ಕುಡಿಸಿ ಅವರ ಗುಪ್ತಾಂಗಕ್ಕೆ ಮೆಣಸಿನಕಾಯಿ ಹಾಕಿ ಪೆಟ್ರೋಲ್ ಇಂಜೆಕ್ಷನ್ ಕೊಟ್ಟಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು ಎನ್ನಲಾಗುತ್ತಿದ್ದು, ಶನಿವಾರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಇನ್ನು ಈ ಪ್ರಕರಣದ ವಿಚಾರವಾಗಿ ಆರು ಮಂದಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವುದಾಗಿ ಡಿಒ ಜಿ.ಕೆ.ದುಬೆ ತಿಳಿಸಿದರು.