ಲಕ್ನೋ: ಉತ್ತರಪ್ರದೇಶದ ಕಾಸ್ಗಂಜ್ನಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ.
ಇವರು ಮಾಘ ಪೂರ್ಣಿಮೆಯ ಪ್ರಯುಕ್ತ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೊರಟಿದ್ದರು ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡ ಯಾತ್ರಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…