ಸುಳ್ಯ: ಅಯೋಧ್ಯೆಯ ಶ್ರೀರಾಮ ಮಂದಿರ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳೂ ನಡೆಯುತ್ತಿದೆ. ಇದೀಗ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಪುರೋಹಿತಕ್ಕೆ ತುಳುನಾಡಿನ ಸುಳ್ಯ ತಾಲೂಕಿನ ಡಾ.ಕೆ ಗಣಪತಿ ಭಟ್ ನೇಮಕವಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕೇಮನಬಳ್ಳಿಯ ಶಾರದಾ ಮತ್ತು ಗೋಪಾಲಕೃಷ್ಣ ಭಟ್ ಅವರ ಪುತ್ರರಾಗಿರುವ ಡಾ. ಕೆ. ಗಣೇಶ ಭಟ್ ಅವರು ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿ.ವಿಯ ಪರಮಚಾರ್ಯ ಗುರುಕುಲದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಜ. 22ರಂದು ಅಯೋಧ್ಯೆಯಲ್ಲಿ ಪ್ರತಿಷ್ಠೆಗೊಳ್ಳಲಿರುವ ರಾಮಲಲ್ಲಾ ವಿಗ್ರಹದ ಧಾರ್ಮಿಕ ವಿಧಿ ವಿಧಾನಗಳು ಜ. 16ರಿಂದ ಆರಂಭಗೊಂಡಿದೆ. ರಾಮಲಲ್ಲಾನ ವಿಗ್ರಹ ಪ್ರತಿಷ್ಠೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ನೇಮಕವಾಗಿರುವ 101 ಮಂದಿ ಪ್ರಧಾನ ಪುರೋಹಿತರಲ್ಲಿ ಡಾ.ಕೆ.ಗಣಪತಿ ಭಟ್ ಒಬ್ಬರಾಗಿದ್ದಾರೆ. ಇವರ ನಾಯಕತ್ವದಲ್ಲಿ 40 ಮಂದಿ ಆರ್ಚಕರಿರಲಿದ್ದಾರೆ. ಡಾ. ಕೆ. ಗಣಪತಿ ಅವರು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ಪುರೋಹಿತರಾಗಿದ್ದಾರೆ.