ಶಾಲಾ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಶಹಾಜಹಾನ್‌ಪುರ: ಶಾಲಾ ಬಸ್ ಡಿಕ್ಕಿಯಾಗಿ ಶಾಲೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಗುರುವಾರ) ನಡೆದಿದೆ.

ಖುತಾರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಹರಿಪುರ ಗ್ರಾಮದ ನಿವಾಸಿ ಗುರ್ಮೆಜ್‌ ಸಿಂಗ್ ಅವರು ತಮ್ಮ ಮಕ್ಕಳಾದ ಜೀತ್‌ ಪಾಲ್‌ (14) ಮತ್ತು ಹರ್ಮೀತ್‌ ಸಿಂಗ್ (9) ಅವರನ್ನು ಸ್ಕೂಟರ್‌ನಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದರು. ಮಾರ್ಗ ಮಧ್ಯೆ ರುದ್ರಪುರ ಗ್ರಾಮದ ಬಳಿ ಸ್ಕೂಟರ್‌ ನಿಲ್ಲಿಸಿದ್ದ ಗುರ್ಮೆಜ್‌, ಮತ್ತೊಂದು ಕೆಲಸದ ಸಲುವಾಗಿ ಹೋಗಿದ್ದರು. ಈ ವೇಳೆ ಹಿಂದಿನಿಂದ ಬಂದ ಬಸ್‌, ರಸ್ತೆಯಲ್ಲಿ ನಿಂತಿದ್ದ ಮಕ್ಕಳಿಗೆ ಡಿಕ್ಕಿಯಾಗಿದೆ.

ಬಸ್ ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮಾಹಿತಿ ನೀಡಿದ್ದಾರೆ.

Gayathri SG

Recent Posts

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

34 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

51 mins ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

1 hour ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

1 hour ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2 hours ago