News Karnataka Kannada
Friday, May 10 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ನೂರು ದಿನಗಳ ಆಡಳಿತ ಪೂರೈಸಿ, ವರದಿಯೊಂದನ್ನು ಬಿಡುಗಡೆ ಗೊಳಿಸಿದ ಸಿಎಂ ಯೋಗಿ

Uttar Pradesh: Yogi Adityanath urges people to hoist tricolour in their homes to celebrate Independence Day
Photo Credit : Twitter

ಉತ್ತರ ಪ್ರದೇಶ: ಎರಡನೇ ಬಾರಿಗೆ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಆಡಳಿತ ನಡೆಸಿದ್ದು ಇಂದು ನೂರು ದಿನಗಳನ್ನು ಪೂರೈಸಿದೆ. ಈ ಕುರಿತು ವರದಿಯೊಂದನ್ನು ಬಿಡುಗಡೆ ಗೊಳಿಸಿದ ಸಿಎಂ ಯೋಗಿ “ಕುಶಾಶನ್” (ದುರಾಡಳಿತ) ತೊಡೆದುಹಾಕುವ ಮೂಲಕ “ಸುಶಾಶನ್” (ಉತ್ತಮ ಆಡಳಿತ) ಸ್ಥಾಪಿಸಿರುವುದಾಗಿ ಹೇಳಿದ್ದಾರೆ. ಈ ನೂರು ದಿನಗಳಲ್ಲಿ ಏನೆಲ್ಲಾ ಸಾಧಿಸಲಾಗಿದೆ ಎಂಬುದರ ಕುರಿತು ಅವರು ಹಂಚಿಕೊಂಡಿರುವ ಕೆಲ ಆಸಕ್ತಿದಾಯಕ ಅಂಕಿ ಅಂಶಗಳ ವಿವರ ಇಲ್ಲಿದೆ.

  • ಪ್ರಸ್ತುತ ಸರ್ಕಾರದ ಕಾರ್ಯನಿರ್ವಹಣೆಯನ್ನು ಮುಖ್ಯ 10 ವಿಭಾಗಗಳಾಗಿ ಹಂಚಿಕೊಳ್ಳಲಾಗಿದ್ದು ಕೃಷಿ, ಕೈಗಾರಿಕೆ, ಸಾಮಾಜಿಕ ಭದ್ರತೆ, ವೈದ್ಯಕೀಯ ಮತ್ತು ಆರೋಗ್ಯ, ನಗರಾಭಿವೃದ್ಧಿ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ, ಶಿಕ್ಷಣ ಮತ್ತು ಆದಾಯ ಮತ್ತು ಕಾನೂನು ಎಂಬ ವಲಯಗಳಾಗಿ ವಿಭಾಗಿಸಲಾಗಿದೆ.
  • ಇನ್ನು ಸ್ವತಃ ಯೋಗಿಯವರೇ ನಿರ್ವಹಿಸುತ್ತಿರುವ ಗೃಹ ಲಾಖೆಯು ಸಾಮಾಜಿಕ ಭದ್ರತೆಗೆ ಹೆಚ್ಚಿನ ಪ್ರಾಶಸ್ತ್ಯಕೊಟ್ಟಿದೆ. ಒಟ್ಟು 16,158 ಅಪರಾಧಿಗಳನ್ನು ಗುರುತಿಸಲಾಗಿದ್ದು 83,721 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರತಿ ಪೋಲೀಸ್‌ ಠಾಣೆಯಲ್ಲಿ ಸೈಬರ್‌ ಡೆಸ್ಕ್‌ ಸ್ಥಾಪನೆ, 30 ಹೊಸ ಅಗ್ನಿಶಾಮಕ ಠಾಣೆಗಳಿಗೆ ಅನುಮೋದನೆ ಮತ್ತು 30 ಅಗ್ನಿಶಾಮಕ ಠಾಣೆಗಳ ನಿರ್ಮಾಣ ಮಾಡಲಾಗಿದೆ.
  • ಅಪರಾಧಿಗಳು ಮತ್ತು ಮಾಫಿಯಾಗೆ ಸೇರಿದ 844 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ, 68,000 ಕ್ಕೂ ಹೆಚ್ಚು ಅತಿಕ್ರಮಿತ ಅಕ್ರಮ ಆಸ್ತಿ ತೆರವು, 1.20 ಲಕ್ಷಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ.
  • ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ವಲಯದಲ್ಲಿ ಸುಮಾರು 2 ಲಕ್ಷ ಕರಕುಶಲಕರ್ಮಿಗಳು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗೆ 16,000 ಕೋಟಿ ರೂ.ಗಳ ಸಾಲವನ್ನು ವಿತರಣೆ ಮಾಡಲಾಗಿದೆ.
  • 100 ದಿನಗಳಲ್ಲಿ 10,000 ಯುವಕರಿಗೆ ಉದ್ಯೋಗ ನೀಡಿಕೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪದಕ ವಿಜೇತ ಕ್ರೀಡಾ ಪಟುಗಳಿಗೆ ಸರ್ಕಾರಿ ಉದ್ಯೋಗದ ವ್ಯವಸ್ಥೆ ಕಲ್ಪಿಸಲಾಗಿದೆ.
  • ಕೃಷಿ ಕ್ಷೇತ್ರಕ್ಕೂ ಉತ್ತೇಜನ ಕಬ್ಬು ರೈತರ ಬಾಕಿ ಪಾವತಿಗೆಂದೇ 12,537 ಕೋಟಿ ರೂ. ಹಣ ವ್ಯಯಿಸಲಾಗಿದೆ.
  • ಯಮುನಾ ಎಕ್ಸ್‌ಪ್ರೆಸ್‌ವೇ ಪ್ರಾಧಿಕಾರದಿಂದ ವೈದ್ಯಕೀಯ ಸಾಧನ ಉದ್ಯಾನವನವನ್ನು ಸ್ಥಾಪನೆ, ಎಕ್ಸ್‌ಪ್ರೆಸ್‌ವೇಗಳ ಉದ್ದಕ್ಕೂ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ. ಆಗ್ರಾ, ಕಾನ್ಪುರ ಮತ್ತು ಗೋರಖ್‌ಪುರದಲ್ಲಿ ಫ್ಲಾಟ್ ಫ್ಯಾಕ್ಟರಿ ಸಂಕೀರ್ಣ ಯೋಜನೆಗೆ ಬಿಡುಗಡೆ ಹೊಸ ಗ್ರೀನ್‌ಫೀಲ್ಡ್ ನೀತಿ ಜಾರಿಗೊಳಿಸಲಾಗಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು