ಬಿಜ್ನೂರ್: ಶೇರ್ ಕೋಟ್ ಎಂಬಲ್ಲಿ ದೇವಾಲಯದ ವೃದ್ಧ ಅರ್ಚಕರೊಬ್ಬರನ್ನು ಶನಿವಾರ ಬೆಳಗಿನ ಜಾವಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಬಿಜ್ನೂರ್ ನಲ್ಲಿ ನಡೆದಿದೆ.
ಬೆಗ್ರಾಮ್ ಎಂಬ 70 ವರ್ಷ ವಯಸ್ಸಿನ ಅರ್ಚಕ ಮನೋಕಾಮನಾ ಮಂದಿರದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸುತ್ತಿದ್ದ ವೇಳೆ ಬೆಳಗಿನ ಜಾವ 4.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ದಿನೇಶ್ ಸಿಂಗ್ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಬೆಗ್ರಾಮ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.