ಉತ್ತರ ಪ್ರದೇಶ: ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮುಂಜಾನೆ ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರೆ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮೃತರನ್ನು ರವಿ ಶ್ರೀವಾಸ್ತವ (40), ವಂದನಾ ಶ್ರೀವಾಸ್ತವ (70) ಮತ್ತು ರತ್ನಾ ಶ್ರೀವಾಸ್ತವ (50) ಎಂದು ಗುರುತಿಸಲಾಗಿದೆ ಎಂದು ಕಪ್ತಾನ್ಗಂಜ್ ಉಸ್ತುವಾರಿ ಇನ್ಸ್ಪೆಕ್ಟರ್ ಸತ್ಯೇಂದ್ರ ಕುನ್ವರ್ ತಿಳಿಸಿದ್ದಾರೆ.
ವಾಹನದ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.