ಬಲ್ಲಿಯಾ: ಸಾಮಾಜಿಕ ಮಾಧ್ಯಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟ್ ಮಜಾರಿಯಾ ಗ್ರಾಮದ ನಿವಾಸಿ ಸುರೇಂದ್ರ ಯಾದವ್ ಬಂಧಿತನನ್ನು ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ವಿಟರ್ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಯಾದವ್ ಸೋಮವಾರ ಆಕ್ಷೇಪಾರ್ಹ ಟೀಕೆಗಳನ್ನು ಪೋಸ್ಟ್ ಮಾಡಿದ್ದರು. ಈ ಸಂಬಂಧ ಅಖಿಲ ಭಾರತ ಕ್ಷತ್ರಿಯ ಮಂಚ್ ಉಸ್ತುವಾರಿ ಬ್ರಿಜೇಶ್ ಸಿಂಗ್ ಅವರು ಮಂಗಳವಾರ ದೂರು ದಾಖಲಿಸಿದ್ದಾರೆ ಎಂದು ನರ್ಹಿ ಪೊಲೀಸ್ ಠಾಣೆ ಉಸ್ತುವಾರಿ ಪನ್ನೆ ಲಾಲ್ ತಿಳಿಸಿದ್ದಾರೆ.
ಯಾದವ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಲಾಲ್ ಹೇಳಿದ್ದಾರೆ.