News Karnataka Kannada
Tuesday, May 07 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಮಿತೀಮಿರಿದ ಮದ್ಯಸೇವನೆ ವ್ಯಕ್ತಿ ಸಾವು

Bengaluru: If liquor is sold illegally, file a complaint
Photo Credit : By Author

ಮೀರತ್: ಉತ್ತರ ಪ್ರದೇಶದ ಮೀರತ್‌ನ ಕಂಕರ್ಖೇಡ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಎಚ್ -58 ರಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮಿತಿಮೀರಿದ ಮದ್ಯ ಸೇವಿಸಿದ ಕಾರಣ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಾಜಸ್ಥಾನದ ಅಲ್ವಾರ್ ನಿವಾಸಿ ರಾಮ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದೆ.

ಅವರು ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಕಾಲೇಜಿನಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿ ಅವರ ಕಾರನ್ನು ಪೊಲೀಸರು ಪತ್ತೆ ಮಾಡಿದರು. ಅವರ ಕಾರಿನಲ್ಲಿ ಮದ್ಯದ ವಾಸನೆ ಬರುತ್ತಿದ್ದು, ಅವರ ಮೃತದೇಹ ಅಲ್ಲಿಯೇ ಪತ್ತೆಯಾಗಿತ್ತು. ಕಾರಿನಲ್ಲಿ ಬಾಟಲಿಯೂ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಆದರೆ ಪ್ರಾಥಮಿಕ ದೃಷ್ಟಿಯಲ್ಲಿ ಶರ್ಮಾ ಮಿತಿಮೀರಿದ ಮದ್ಯ ಸೇವನೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶವಪರೀಕ್ಷೆ ವರದಿಗಳು ಬರಬೇಕಿದ್ದು, ನಂತರ ಸಾವಿಗೆ ನಿಜವಾದ ಕಾರಣ ತಿಳಿಯಬಹುದು.

“ತನಿಖೆಯ ಸಮಯದಲ್ಲಿ, ಅವರು ಕಾರನ್ನು ಮೇಲ್ಸೇತುವೆಯ ಬಳಿ ನಿಲ್ಲಿಸಿರುವುದು ಕಂಡುಬಂದಿದೆ. ನಂತರ, ಶರ್ಮಾ ಅವರು ಭಾನುವಾರ ಬಾಗ್ಪತ್ ಫ್ಲೈಓವರ್ ಬಳಿಯ ವೈನ್ ಶಾಪ್‌ನಿಂದ ಮದ್ಯವನ್ನು ಖರೀದಿಸಿ ಅದನ್ನು ಕುಡಿಯುತ್ತಿರುವ ಸಿಸಿಟಿವಿ ದೃಶ್ಯಗಳನ್ನು ನಾವು ಕಂಡುಕೊಂಡಿದ್ದೇವೆ” ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು