News Karnataka Kannada
Friday, May 10 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ಹಾವು ಕಡಿತಕ್ಕೊಳಗಾಗಿ ಸಹೋದರರಿಬ್ಬರು ಸಾವು

17-year-old girl found murdered in field
Photo Credit :

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ಭವಾನಿಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪರವೂರಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ತನ್ನ ಸಹೋದರ ಹಾವು ಕಡಿತಕ್ಕೊಳಗಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ವೇಳೆ ಆತನೂ ಸಹ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿದ್ದಾನೆ.

ಭವಾನಿಪುರ ಗ್ರಾಮದ ಗೋವಿಂದ ಮಿಶ್ರಾ ಹಾವು ಕಡಿತದಿಂದ ಸಾವನ್ನಪ್ಪಿದ್ದ ವ್ಯಕ್ತಿ.  ಸಹೋದರ ಅರವಿಂದ ಮಿಶ್ರಾನ ಅಂತ್ಯಸಂಸ್ಕಾರಕ್ಕೆ ಲೂಧಿಯಾನದಿಂದ ಬಂದಿದ್ದ. ಈತ ರಾತ್ರಿ ಮಲಗಿದ್ದ ವೇಳೆ ಹಾವು ಕಚ್ಚಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.ಈತನೊಂದಿಗೆ ಅದೇ ಕೋಣೆಯಲ್ಲಿ ಮಲಗಿದ್ದ ಚಂದ್ರಶೇಖರ ಪಾಂಡೆ ಎಂಬಾತನಿಗೂ ಹಾವು ಕಚ್ಚಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರಶೇಖರ ಪಾಂಡೆ ಸಹ ಲೂಧಿಯಾನಾದಲ್ಲಿ ಕೆಲಸ ಮಾಡುತ್ತಿದ್ದು ಗೋವಿಂದ ಮಿಶ್ರಾ ಜೊತೆ ಅಂತ್ಯ ಸಂಸ್ಕಾರಕ್ಕೆ ಆಗಮಿಸಿದ್ದ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು