News Karnataka Kannada
Tuesday, April 30 2024
ಉತ್ತರ ಪ್ರದೇಶ

ಉತ್ತರ ಪ್ರದೇಶ: ವ್ಯಾನ್‌ ಗೆ ಟ್ಯಾಂಕರ್‌ ಡಿಕ್ಕಿ, ಇಬ್ಬರ ಸಾವು ಆರುಮಂದಿಗೆ ಗಾಯ

Woman killed in accident, son Ashwin and husband critically injured
Photo Credit : Wikimedia

ಉತ್ತರ ಪ್ರದೇಶ: ಖತೋಲಿ-ಬುಧಾನಾ ರಸ್ತೆಯಲ್ಲಿ ಪ್ರಯಾಣಿಕರು ಸಾಗುತ್ತಿದ್ದ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

ಮೂಲಗಳ ವರದಿಗಳ ಪ್ರಕಾರ, ಸಾಥೇಡಿ ಗಂಗಾ ಕಾಲುವೆ ಬಳಿ ಖತೋಲಿ-ಬುಧಾನ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಾನ್ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ಗಾಯಗೊಂಡ ಆರು ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ಹಫೀಜ್ ಶಾಹಿದ್ (60) ಮತ್ತು ಜಯವತಿ (50) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ಕೂಡಲೇ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ಚಾಲಕನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು