News Karnataka Kannada
Thursday, May 02 2024
ಉತ್ತರ ಪ್ರದೇಶ

ವಾರಣಾಸಿ: ಬಿಎಚ್ ಯು ಸಂಶೋಧನಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರೀತಿಸಿದವರೊಂದಿಗೆ ವಿವಾಹವಾಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ ನಡೆದಿದೆ.
Photo Credit : IANS

ವಾರಣಾಸಿ: ಬಿಎಚ್ ಯು ಐಐಟಿಯ ಎಸ್ಎನ್ ಬೋಸ್ ಹಾಸ್ಟೆಲ್ ನಲ್ಲಿ ಸಂಶೋಧನಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ಹಾಸ್ಟೆಲ್ ವಿದ್ಯಾರ್ಥಿಗಳು ನೀಡಿದ ಮಾಹಿತಿಯ ಮೇರೆಗೆ  ಪೊಲೀಸ್ ಠಾಣೆಯ ಅಧಿಕಾರಿಗಳು ಸಂತ್ರಸ್ತನ ಕೊಠಡಿಗೆ ತಲುಪಿ ಶವವನ್ನು ಕೆಳಗಿಳಿಸಿದರು.

ಮುಜಾಫರ್ ನಗರ ಜಿಲ್ಲೆಯ ಖಖೇಡಿ ಗ್ರಾಮದವರಾದ ಕುಲದೀಪ್ ಸಿಂಗ್ (32) ಬಿಎಚ್ ಯು ಐಐಟಿಯ ಎಸ್ಎನ್ ಬೋಸ್ ಹಾಸ್ಟೆಲ್ ನ ಕೊಠಡಿ ಸಂಖ್ಯೆ 88 ರಲ್ಲಿ ವಾಸಿಸುತ್ತಿದ್ದರು.

ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರ ಪ್ರಕಾರ, ವಿದ್ಯಾರ್ಥಿಯ ಆತ್ಮಹತ್ಯೆಗೆ ಖಿನ್ನತೆ ಕಾರಣವಾಗಿರಬಹುದು ಎಂದಿದ್ದಾರೆ.

ವಿದ್ಯಾರ್ಥಿಯ ಕೊಠಡಿಯಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಎಸಿಪಿ ಭೇಲುಪುರ್ ಪ್ರವೀಣ್ ಕುಮಾರ್ ಸಿಂಗ್ ಹೇಳಿದ್ದಾರೆ. ಅವರ ಕುಟುಂಬ ಆಗಮಿಸಿದ ನಂತರವೇ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಎಂದು  ಸಿಂಗ್ ಹೇಳಿದ್ದಾರೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು