ವಾರಣಾಸಿ: ಭೋಜ್ಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಆರೋಪಿಗಳಾದ ಭೋಜ್ಪುರಿ ಗಾಯಕರಾದ ಸಮರ್ ಸಿಂಗ್ ಮತ್ತು ಸಂಜಯ್ ಸಿಂಗ್ ವಿರುದ್ಧ ವಾರಣಾಸಿ ಪೊಲೀಸರು ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದಾರೆ.
ಮಾರ್ಚ್ 26 ರಂದು ಸಾರನಾಥದ ಹೋಟೆಲ್ ಸುಮೇಂದ್ರ ರೆಸಿಡೆನ್ಸಿಯ ತನ್ನ ಕೋಣೆಯಲ್ಲಿ ಆಕಾಂಕ್ಷಾ ಶವವಾಗಿ ಪತ್ತೆಯಾಗಿದ್ದರು. 12 ದಿನಗಳು ಕಳೆದರೂ ಪೊಲೀಸರು ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ. ಈ ಕುರಿತು ವಿವರ ನೀಡಿದ ಅಸಿಸ್ಟೆಂಟ್ ಕಮಿಷನರ್ ಆಫ್ ಪೋಲೀಸ್, ಸಾರನಾಥ್, ಜ್ಞಾನ್ ಪ್ರಕಾಶ್ ರೈ, “ನಾವು ಆರೋಪಿಗಳಿಬ್ಬರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದ್ದೇವೆ. ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ.
ಮೃತ ನಟಿಯ ತಾಯಿ ಮಧು ದುಬೆ ಅವರು ಮಾರ್ಚ್ 27 ರಂದು ಆತ್ಮಹತ್ಯೆಗೆ ಪ್ರಚೋದನೆ ಕಾಯ್ದೆ ಅಡಿಯಲ್ಲಿ ಭೋಜ್ಪುರಿ ಗಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. “ಸಮರ್, ಆಂಕಾಕ್ಷಾಗೆ 3 ಕೋಟಿ ರೂಪಾಯಿ ನೀಡಲು ಬಾಕಿ ಉಳಿಸಿಕೊಂಡಿದ್ದು, ಅದನ್ನು ಕೇಳಿದಾಗ, ಸಮರ್ ಅವಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ದೂರಿನಲ್ಲಿ ಮಧು ವಿವರಿಸಿದ್ದಾರೆ.
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್…